Featured

28 ಕ್ಷೇತ್ರದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಿ , ರಾಜ್ಯವನ್ನು ಬಿಜೆಪಿ ಮುಕ್ತ ಕರ್ನಾಟಕವೇ ನಮ್ಮ ಗುರಿ :ಸಿದ್ದರಾಮಯ್ಯ – Vishwanews24

ಬೆಂಗಳೂರು: ಕರ್ನಾಟಕದ 28 ಕ್ಷೇತ್ರದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಿ ರಾಜ್ಯವನ್ನು ಬಿಜೆಪಿ ಮುಕ್ತ ಮಾಡಬೇಕೆಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರ ಹೊರವಲಯದ ಮಾದಾವರದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌-ಜೆಡಿಎಸ್‌ ಜಂಟಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರ ಸೂಚನೆ ಮೇರೆಗೆ ಜಂಟಿ ಸಮಾವೇಶ ಆಯೋಜನೆ ಮಾಡಲಾಗಿದೆ. ಏಪ್ರಿಲ್‌-ಮೇನಲ್ಲಿ ಲೋಕ ಸಭೆ ಚುನಾವಣೆ ನಡೆಯುತ್ತಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಪ್ರಯತ್ನ ನಡೆಸಿದ್ದಾರೆ. ಆದರೆ, ಜಾತ್ಯಾತೀತ ಶಕ್ತಿಗಳು ಒಂದಾಗಿ ದೇಶಕ್ಕೆ ಸ್ಪಷ್ಟ ಸಂದೇಶ ರವಾನೆ ಮಾಡಬೇಕು ಎಂದರು.

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ರೈತರ ಆತ್ಮಹತ್ಯೆಗಳು ನಡೆಯುತ್ತಿವೆ. ಯುವಕರು ಉದ್ಯೋಗವಿಲ್ಲದೆ ಅತಂತ್ರರಾಗಿದ್ದಾರೆ. ಮಹಿಳೆಯರು, ದಲಿತರು ಭಯಭೀತರಾಗಿದ್ದಾರೆ. ಇಂಥ ಕೋಮುವಾದಿ ಸರ್ಕಾರವನ್ನು ತೊಲಗಿಸಲು ಜಾತ್ಯತೀತ ಶಕ್ತಿಗಳು ಒಂದಾಗಬೇಕು. ಕೇಂದ್ರದಲ್ಲಿ ಯುಪಿಎ ಅಧಿಕಾರಕ್ಕೆ ಬಂದು ರಾಹುಲ್‌ಗಾಂಧಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂದರು.

ರಾಜ್ಯದಲ್ಲಿ ಮೇ ತಿಂಗಳಲ್ಲಿ ಮೈತ್ರಿ ಸರ್ಕಾರ ಜಾರಿಗೆ ಬಂದಿದೆ. ಎರಡೂ ಪಕ್ಷಗಳು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಹಾಕಿಕೊಂಡು, ಬಡವರು, ದಲಿತರ ಪರ ಜನಪರ ಯೋಜನೆಗಳನ್ನು ಕೊಡಲಾಗುತ್ತಿದೆ. ರಾಜ್ಯದ 28 ಕ್ಷೇತ್ರಗಳನ್ನು ಒಟ್ಟಾಗಿ ಗೆಲ್ಲಬೇಕು. ಹಿಂದೆ ಏನೇ ಹೋರಾಟ ಮಾಡಿದ್ದರೂ ಬಿಜೆಪಿ ಸೋಲಿಸಲು ನಮ್ಮ ಭಿನ್ನಾಭಿಪ್ರಾಯ ಮರೆತು ಪ್ರಯತ್ನ ಮಾಡಬೇಕು ಎಂದರು. ಈಗ ರಾಜ್ಯಾಂಗಕ್ಕೆ ರಕ್ಷಣೆ ಇಲ್ಲ. ನಮ್ಮ ದೇಶದ ಜನರು ಬುದ್ದಿವಂತರು..

ಪ್ರಜಾಪ್ರಭುತ್ವಕ್ಕೆ ಅಪಾಯ ಬಂದಾಗ ಸಂವಿಧಾನ ಉಳಿಸುತ್ತಾರೆ ಎನ್ನುವ ನಂಬಿಕೆ ಇದೆ. ಮೋದಿ, ಅಮಿತ್‌ ಶಾ, ಆರ್‌ಎಸ್‌ಎಸ್‌ ಸಂಘಚಾಲಕರು ಸಂವಿಧಾನ ಬದಲಾವಣೆ ಮಾಡಬೇಕು, ಮೀಸಲಾತಿ ತೆಗೆಯಬೇಕು ಎಂದು ಹೇಳುತ್ತಾರೆ. ನಾವು ಸಂವಿಧಾನ ಉಳಿಸಬೇಕಿದೆ. ಪ್ರಧಾನಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ದೂರಿದರು.

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago