ಬೆಂಗಳೂರು: ಬಡವರು, ಜನಸಾಮಾನ್ಯರಿಗೆ ಅನುಕೂಲವಾಗುವಂತೆ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನೌಷಧ ಮಳಿಗೆಗಳನ್ನು ತೆರೆಯಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
ಬಾಗಲಗುಂಟೆಯಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಮಾರುಕಟ್ಟೆಗಿಂತ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಗಳ ಬಡವರು ಮತ್ತು ಶ್ರೀಸಾಮಾನ್ಯರಿಗೆ ತಲುಪಿಸಲು ಜನೌಔಷಧ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನೌಷಧ ಕೇಂದ್ರಗಳನ್ನು ಆರಂಭಿಸಲು ಆದ್ಯತೆ ನೀಡಲಾಗಿದೆ. ಅತಿ ಹಿಂದುಳಿದ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಜನೌಷಧ ಕೇಂದ್ರಗಳನ್ನು ಆರಂಭಿಸಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನ ಔಷಧ ಮಳಿಗೆಗಳು ಮತ್ತು ಉಗ್ರಾಣಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ಅನೇಕ ಕಡೆಗಳಲ್ಲಿ ಜನೌಷಧ ಮಳಿಗೆಗಳಿಂದ ಬಡ ಜನರಿಗೆ ಅನುಕೂಲವಾಗುತ್ತದೆ. ಕಡಿಮೆ ದರದಲ್ಲಿ ಗುಣಮಟ್ಟದ ಔಷಧ, ಆರೋಗ್ಯಸೇವೆ ಸಿಗಬೇಕೆನ್ನುವುದು ಯೋಜನೆಯ ಉದ್ದೇಶವಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…