ರಾಜ್ಯದಲ್ಲೂ ಎನ್ ಆರ್ ಸಿ ಜಾರಿಗೆ : ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24
ಹಾವೇರಿ : ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶಾದ್ಯಂತ ಜಾರಿ ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ ಬೆನ್ನಲ್ಲೇ ರಾಜ್ಯದಲ್ಲೂ ಎನ್ ಆರ್ ಸಿ ಜಾರಿಗೆ ಸಾಧ್ಯತೆಯ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ ಆರ್ ಸಿ ರಾಜ್ಯದಲ್ಲಿ ಜಾರಿ ಸಂಬಂಧ ಈಗಾಗಲೇ ಎರಡು ಸಲ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕಾನೂನು ಜಾರಿ ಕುರಿತು ಇದೇ ವಾರದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.
ವಿಶೇಷವಾಗಿ ಬೆಂಗಳೂರು ಮತ್ತು ಇತರ ಮಹಾನಗರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿ ವಲಸಿಗರು ನೆಲೆಸಿದ್ದು, ಎನ್ ಆರ್ ಸಿ ಕಾನೂನು ಜಾರಿ ಕುರಿತು ಇದೇ ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈಗಾಗಲೇ ಅಸ್ಸಾಂನಲ್ಲಿ ಎನ್ ಆರ್ ಸಿ ಪಟ್ಟಿ ಬಿಡುಗಡೆಯಾಗಿದ್ದು, 3,11,21,004 ಅಸ್ಸಾಂ ಅಧಿಕೃತ ನಾಗರಿಕರಾಗಿದ್ದು, 19 ಲಕ್ಷ 6,657 ಜನ ಪಟ್ಟಿಯಿಂದ ಹೊರಕ್ಕೆ ಹಾಕಲಾಗಿದ್ದು, 19 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು ಎಂದು ಕೇಂದ್ರ ಗೃಹ ಇಲಾಖೆಯಿಂದ ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ತಿಳಿಸಲಾಗಿದೆ.
