ಕೆಂಗೇರಿ: ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳಮುಖಿಯರಿಗಾಗಿಯೇ (ಟ್ರಾನ್ಸ್ಜೆಂಡರ್ ಸಮುದಾಯ) ಪ್ರತ್ಯೇಕ ವಸತಿ ಯೋಜನೆಗೆ ಚಾಲನೆ ನೀಡಲಾಗಿದೆ.
ರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಳಿಗೊಂಡನಹಳ್ಳಿ ಸರ್ವೆ ನಂಬರ್ 26ರಲ್ಲಿ ‘ಮಂಗಳ ಗ್ರಾಮ’ ಕಾಮಗಾರಿಗೆ ವಸತಿ ಸಚಿವ ವಿ.ಸೋಮಣ್ಣ ಗುದ್ದಲಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ‘ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 20 ಕೋಟಿ ರೂ. ವೆಚ್ಚದಲ್ಲಿ ವಸತಿ ಸಮುಚ್ಚಯ ನಿರ್ಮಿಸಲಾಗುತ್ತಿದೆ. ಸುಮಾರು 2 ಎಕರೆ 20 ಗುಂಟೆ ವಿಸ್ತೀರ್ಣದ ಜಾಗದಲ್ಲಿ 160 ಮನೆಗಳನ್ನು ನಿರ್ಮಿಸಲಾಗುವುದು ಎಂದರು. ‘ಯೋಜನೆ ಅನುಷ್ಠಾನಕ್ಕಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಭೂಮಿಯನ್ನು ಕೊಳಚೆ ಅಭಿವೃದ್ಧಿ ಮಂಡಳಿಗೆ ಹಸ್ತಾಂತರಿಸಿದ್ದಾರೆ. ಸಂಪರ್ಕ ರಸ್ತೆ, ಬೀದಿ ದೀಪದಂತಹ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಒಂದು ವರ್ಷದ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇನೆ’ ಎಂದರು.
ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಬಿ ವೆಂಕಟೇಶ್, ಕರ್ನಾಟಕ ತೃತೀಯ ಲಿಂಗಿಗಳ ಸಂಘದ ಅಧ್ಯಕ್ಷೆ ಕ್ಷಮಾ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ನಿರ್ದೇಶಕ (ಬೆಂಗಳೂರು ವೃತ್ತ) ಎನ್. ಪಿ ಬಾಲರಾಜ್, ಕಾರ್ಯಪಾಲಕ ಅಭಿಯಂತರ ಸಿ. ಕೆ ರವಿಕುಮಾರ್, ಸಮತಾ ಸೈನಿಕ ದಳದ ಉಪಾಧ್ಯಕ್ಷ ಪಿಳ್ಳರಾಜ್,ಬಸಣ್ಣ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…