ರಾಜ್ಯ ನ್ಯೂಸ್

ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ : ಸಿದ್ದರಾಮಯ್ಯ – Vishwnaews24

ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಸದಸ್ಯರ ಮೇಲೆ ಮನೆಗೆ ಬೆಂಕಿ ಹಚ್ಚಲು ಬಂ ದ ಆರೋ‍ಪ ಹೊರಿಸಿ ಬಂಧಿಸಲಾಗಿದೆ

ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನುತಕ್ಷಣ ಬಂಧಿಸಬೇಕು..

ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ..

ಬೆಂಗಳೂರು: ‘ತಿಪಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮನೆ ಎದುರು ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್‌ಎಸ್‌ಎಸ್‌ನವರು ಹಿಂದೆ ಚಡ್ಡಿ ಹಾಕುತ್ತಿದ್ದರು. ಈಗ ಪ್ಯಾಂಟ್‌ ಹಾಕುತ್ತಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಸದಸ್ಯರು ಸಾಂಕೇತಿಕವಾಗಿ ಒಂದು ಚಡ್ಡಿ ಸುಟ್ಟಿದ್ದರು. ಅವರ ಮೇಲೆ ಮನೆಗೆ ಬೆಂಕಿ ಹಚ್ಚಲು ಬಂ ದ ಆರೋ‍ಪ ಹೊರಿಸಿ ಬಂಧಿಸಲಾಗಿದೆ. ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಡವೇ ಕಾರಣ’ ಎಂದರು.

‘ರೋಹಿತ್‌, ಮಂಜು ಎಂಬ ರೌಡಿಗಳು ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಮೊಕದ್ದಮೆ ದಾಖಲಿಸಿ, ತಕ್ಷಣ ಬಂಧಿಸಬೇಕು. ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದೇ ಇದ್ದರೆ ರಾಜ್ಯದಾದ್ಯಂತ ಬೀದಿಗಿಳಿದು ಹೋರಾಟ ನಡೆಸುತ್ತೇವೆ’ ಎಂದು ಹೇಳಿದರು.

ಪ್ರತಿಭಟನಾಕಾರರು ಸಚಿವರ ಮನೆಯ ಒಳಗೆ ಪ್ರವೇಶ ಮಾಡಿರಲಿಲ್ಲ. ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ. ಅದನ್ನೇ ತಿರುಚಿ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ದೂರಿದರು.

Vishwa News 24

Recent Posts

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

21 seconds ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

23 minutes ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

29 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

3 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago