ಬೆಂಗಳೂರು: ‘ತಿಪಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮನೆ ಎದುರು ಪ್ರತಿಭಟನೆ ನಡೆಸಿದ ಎನ್ಎಸ್ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್ಎಸ್ಎಸ್ನವರು ಹಿಂದೆ ಚಡ್ಡಿ ಹಾಕುತ್ತಿದ್ದರು. ಈಗ ಪ್ಯಾಂಟ್ ಹಾಕುತ್ತಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಿದ ಎನ್ಎಸ್ಯುಐ ಸದಸ್ಯರು ಸಾಂಕೇತಿಕವಾಗಿ ಒಂದು ಚಡ್ಡಿ ಸುಟ್ಟಿದ್ದರು. ಅವರ ಮೇಲೆ ಮನೆಗೆ ಬೆಂಕಿ ಹಚ್ಚಲು ಬಂ ದ ಆರೋಪ ಹೊರಿಸಿ ಬಂಧಿಸಲಾಗಿದೆ. ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಡವೇ ಕಾರಣ’ ಎಂದರು.
‘ರೋಹಿತ್, ಮಂಜು ಎಂಬ ರೌಡಿಗಳು ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಮೊಕದ್ದಮೆ ದಾಖಲಿಸಿ, ತಕ್ಷಣ ಬಂಧಿಸಬೇಕು. ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದೇ ಇದ್ದರೆ ರಾಜ್ಯದಾದ್ಯಂತ ಬೀದಿಗಿಳಿದು ಹೋರಾಟ ನಡೆಸುತ್ತೇವೆ’ ಎಂದು ಹೇಳಿದರು.
ಪ್ರತಿಭಟನಾಕಾರರು ಸಚಿವರ ಮನೆಯ ಒಳಗೆ ಪ್ರವೇಶ ಮಾಡಿರಲಿಲ್ಲ. ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ. ಅದನ್ನೇ ತಿರುಚಿ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ದೂರಿದರು.
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…