ರಾಜ್ಯ ನ್ಯೂಸ್

ರಾಜ್ಯದಾದ್ಯಂತ ಬಿಜೆಪಿಯಿಂದ ಇಂದು ‘ಜನಮತ ವಿರೋಧಿ ದಿನ’

ರೈತರ ಸಾಲದ ಜೊತೆಗೆ ಖಾಸಗಿ ಸಾಲವನ್ನೂ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಕೊಟ್ಟ ಭರವಸೆಗಳನ್ನು ಈಡೇರಿಸದಿದ್ದರೆ, ರಾಜ್ಯವನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ’ ಎಂದು ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.

‘ಎಚ್. ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಈ ದಿನ ರಾಜ್ಯಕ್ಕೇ ಕರಾಳ ದಿನ. ಹೀಗಾಗಿ ಕಪ್ಪು ಪಟ್ಟಿ ಧರಿಸಿ ನಾವು ಹೋರಾಟ ಮಾಡುತ್ತಿದ್ದೇವೆ’ ಎಂದರು.

‘ಜೆಡಿಎಸ್—ಕಾಂಗ್ರೆಸ್ ಅಪವಿತ್ರ ಮೈತ್ರಿಯನ್ನು ಜನ ಅಪಹಾಸ್ಯ ಮಾಡುತ್ತಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೇ ಕರ್ನಾಟಕದ ಜನ ನಿಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಇನ್ನು ಯಾವ ಮುಖ ಇಟ್ಟುಕೊಂಡು ಇಲ್ಲಿಗೆ ಬರ್ತಿದ್ದೀರ’ ಎಂದು ಪ್ರಶ್ನಿಸಿದರು.

‘ಬಹುಮತ ಸಿಗದಿದ್ದರೆ ವಿರೋಧ ಪಕ್ಷದಲ್ಲಿ ಕೂರುವುದಾಗಿ ಹೇಳಿದ್ದ ದೇವೇಗೌಡ ಈಗ ಮಾಡಿದ್ದೇನು? ತಾಕತ್ತಿದ್ದರೆ, ಈಗಲೂ ಜನರ ಮುಂದೆ ಹೋಗೋಣ ಬನ್ನಿ. ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಪಡೆಯದಿದ್ದರೆ ನನ್ನ ಹೆಸರು ಬದಲಿಸಿಕೊಳ್ಳುತ್ತೇನೆ’ ಎಂದು ಸವಾಲು ಹಾಕಿದರು.

ಜೆಡಿಎಸ್ ಮತ್ತು ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಟೀಕಿಸಿ ಬಿಜೆಪಿ ಬೆಂಗಳೂರಿನಲ್ಲಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.ಕಪ್ಪು ಪಟ್ಟಿ ತೊಟ್ಟು ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ  ಬಿ.ಎಸ್. ಯಡಿಯೂರಪ್ಪ, ಆರ್.ಅಶೋಕ, ಶೋಭಾ‌ಕರಂದ್ಲಾಜೆ, ರವಿಕುಮಾರ್ ಭಾಗಿಯಾಗಿದ್ದರು.

ರಾಜ್ಯದ ವಿವಿಧ ಕಡೆಗಳಲ್ಲೂ ಬಿಜೆಪಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.

Vishwa News 24

Recent Posts

ಅನುಮತಿ ಇಲ್ಲದೆ ನ್ಯಾಯಾಲಯದ ಕಲಾಪಗಳ ಆಡಿಯೋ-ವಿಡಿಯೊ ಹಂಚಿಕೆಗೆ ಸುಪ್ರೀಂ ಕೋರ್ಟ್ ನಿರ್ಬಂಧ – vishwanews24

ಕೋರ್ಟ್ ಕಲಾಪಗಳ ವಿಡಿಯೋ ಹಂಚಿಕೊಳ್ಳುವ ಮುನ್ನ ಎಚ್ಚರ.. ಅನುಮತಿ ಇಲ್ಲದೆ ಆಡಿಯೋ-ವಿಡಿಯೋ ಪೋಸ್ಟ್, ರೀಲ್ಸ್ ಮಾಡುವಂತಿಲ್ಲ; ಸುಪ್ರೀಂ ಆದೇಶ ನವದೆಹಲಿ:…

8 minutes ago

ಉಡುಪಿ : ನೇರ ಸಂದರ್ಶನ – vishwanews24

ಉಡುಪಿ : ನೇರ ಸಂದರ್ಶನ   ಉಡುಪಿ : ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ‍್ಸ್ನ ಹರ್ಷ…

33 minutes ago

ಉಡುಪಿ  : ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆ : ನೇರ ಸಂದರ್ಶನ – vishwanews24

 ಉಡುಪಿ  : ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆ : ನೇರ ಸಂದರ್ಶನ      ಉಡುಪಿ: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ…

40 minutes ago

ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 28 ಮತ್ತು 29ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ – vishwanews24

ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 28 ಮತ್ತು 29ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ ಕಾಪು :  ಉಡುಪಿ…

50 minutes ago

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ -vishwanews24

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…

14 hours ago

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…

14 hours ago