’ರೈತರ ಸಾಲದ ಜೊತೆಗೆ ಖಾಸಗಿ ಸಾಲವನ್ನೂ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಕೊಟ್ಟ ಭರವಸೆಗಳನ್ನು ಈಡೇರಿಸದಿದ್ದರೆ, ರಾಜ್ಯವನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ’ ಎಂದು ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.
‘ಎಚ್. ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಈ ದಿನ ರಾಜ್ಯಕ್ಕೇ ಕರಾಳ ದಿನ. ಹೀಗಾಗಿ ಕಪ್ಪು ಪಟ್ಟಿ ಧರಿಸಿ ನಾವು ಹೋರಾಟ ಮಾಡುತ್ತಿದ್ದೇವೆ’ ಎಂದರು.
‘ಜೆಡಿಎಸ್—ಕಾಂಗ್ರೆಸ್ ಅಪವಿತ್ರ ಮೈತ್ರಿಯನ್ನು ಜನ ಅಪಹಾಸ್ಯ ಮಾಡುತ್ತಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೇ ಕರ್ನಾಟಕದ ಜನ ನಿಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಇನ್ನು ಯಾವ ಮುಖ ಇಟ್ಟುಕೊಂಡು ಇಲ್ಲಿಗೆ ಬರ್ತಿದ್ದೀರ’ ಎಂದು ಪ್ರಶ್ನಿಸಿದರು.
‘ಬಹುಮತ ಸಿಗದಿದ್ದರೆ ವಿರೋಧ ಪಕ್ಷದಲ್ಲಿ ಕೂರುವುದಾಗಿ ಹೇಳಿದ್ದ ದೇವೇಗೌಡ ಈಗ ಮಾಡಿದ್ದೇನು? ತಾಕತ್ತಿದ್ದರೆ, ಈಗಲೂ ಜನರ ಮುಂದೆ ಹೋಗೋಣ ಬನ್ನಿ. ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಪಡೆಯದಿದ್ದರೆ ನನ್ನ ಹೆಸರು ಬದಲಿಸಿಕೊಳ್ಳುತ್ತೇನೆ’ ಎಂದು ಸವಾಲು ಹಾಕಿದರು.
ಜೆಡಿಎಸ್ ಮತ್ತು ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಟೀಕಿಸಿ ಬಿಜೆಪಿ ಬೆಂಗಳೂರಿನಲ್ಲಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.ಕಪ್ಪು ಪಟ್ಟಿ ತೊಟ್ಟು ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಬಿ.ಎಸ್. ಯಡಿಯೂರಪ್ಪ, ಆರ್.ಅಶೋಕ, ಶೋಭಾಕರಂದ್ಲಾಜೆ, ರವಿಕುಮಾರ್ ಭಾಗಿಯಾಗಿದ್ದರು.
ರಾಜ್ಯದ ವಿವಿಧ ಕಡೆಗಳಲ್ಲೂ ಬಿಜೆಪಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…