’ರೈತರ ಸಾಲದ ಜೊತೆಗೆ ಖಾಸಗಿ ಸಾಲವನ್ನೂ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಕೊಟ್ಟ ಭರವಸೆಗಳನ್ನು ಈಡೇರಿಸದಿದ್ದರೆ, ರಾಜ್ಯವನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ’ ಎಂದು ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.
‘ಎಚ್. ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಈ ದಿನ ರಾಜ್ಯಕ್ಕೇ ಕರಾಳ ದಿನ. ಹೀಗಾಗಿ ಕಪ್ಪು ಪಟ್ಟಿ ಧರಿಸಿ ನಾವು ಹೋರಾಟ ಮಾಡುತ್ತಿದ್ದೇವೆ’ ಎಂದರು.
‘ಜೆಡಿಎಸ್—ಕಾಂಗ್ರೆಸ್ ಅಪವಿತ್ರ ಮೈತ್ರಿಯನ್ನು ಜನ ಅಪಹಾಸ್ಯ ಮಾಡುತ್ತಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೇ ಕರ್ನಾಟಕದ ಜನ ನಿಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಇನ್ನು ಯಾವ ಮುಖ ಇಟ್ಟುಕೊಂಡು ಇಲ್ಲಿಗೆ ಬರ್ತಿದ್ದೀರ’ ಎಂದು ಪ್ರಶ್ನಿಸಿದರು.
‘ಬಹುಮತ ಸಿಗದಿದ್ದರೆ ವಿರೋಧ ಪಕ್ಷದಲ್ಲಿ ಕೂರುವುದಾಗಿ ಹೇಳಿದ್ದ ದೇವೇಗೌಡ ಈಗ ಮಾಡಿದ್ದೇನು? ತಾಕತ್ತಿದ್ದರೆ, ಈಗಲೂ ಜನರ ಮುಂದೆ ಹೋಗೋಣ ಬನ್ನಿ. ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಪಡೆಯದಿದ್ದರೆ ನನ್ನ ಹೆಸರು ಬದಲಿಸಿಕೊಳ್ಳುತ್ತೇನೆ’ ಎಂದು ಸವಾಲು ಹಾಕಿದರು.
ಜೆಡಿಎಸ್ ಮತ್ತು ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಟೀಕಿಸಿ ಬಿಜೆಪಿ ಬೆಂಗಳೂರಿನಲ್ಲಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.ಕಪ್ಪು ಪಟ್ಟಿ ತೊಟ್ಟು ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಬಿ.ಎಸ್. ಯಡಿಯೂರಪ್ಪ, ಆರ್.ಅಶೋಕ, ಶೋಭಾಕರಂದ್ಲಾಜೆ, ರವಿಕುಮಾರ್ ಭಾಗಿಯಾಗಿದ್ದರು.
ರಾಜ್ಯದ ವಿವಿಧ ಕಡೆಗಳಲ್ಲೂ ಬಿಜೆಪಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…