ಬೆಂಗಳೂರು: ಬೇಸಿಗೆ ಬೇಗೆಯಿಂದ ಕಂಗೆಟ್ಟಿದ್ದ ಕರುನಾಡ ಜನತೆಗೆ ಮಳೆರಾಯ ಗುಡ್ನ್ಯೂಸ್ನ ಸುಳಿವು ನೀಡಿದ್ದು, ಮುಂದಿನ 5 ದಿನ ರಾಜ್ಯದಾದ್ಯಂತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಬೇಸಿಗೆ ಆರಂಭದಲ್ಲೇ ಜನ ಬಿಸಿಲ ಬೇಗೆಗೆ ಕಂಗೆಟ್ಟಿದ್ದಾರೆ. ಕಳೆದ ಒಂದು ತಿಂಗಳಿನಿಂದ ಸುಡು ಬಿಸಿಲಿಗೆ ಬೆಂದಂತಾಗಿರೋ ಜನಸಾಮಾನ್ಯನಿಗೆ ಸದ್ಯ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಮುಂದಿನ 5 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮಳೆಯ ಸೂಚನೆ ನೀಡಿದೆ.
ಮಧ್ಯಪ್ರದೇಶದಿಂದ ತಮಿಳುನಾಡಿ ನಲ್ಲಿ 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ 5 ದಿನಕಾಲ ಮಳೆ ಇರಲಿದ್ದು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಅದೇ ರೀತಿಯಾಗಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೆ ಬುಧವಾರ ರಾತ್ರಿ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಭಾಗದ ಅನೇಕ ಕಡೆ ಜೋರು ಮಳೆಯಾಗಿದೆ. ಇದರ ಜೊತೆಗೆ ಮುಂದಿನ ಎರಡು ದಿನ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…