ಬೆಂಗಳೂರು: ಬೇಸಿಗೆ ಬೇಗೆಯಿಂದ ಕಂಗೆಟ್ಟಿದ್ದ ಕರುನಾಡ ಜನತೆಗೆ ಮಳೆರಾಯ ಗುಡ್ನ್ಯೂಸ್ನ ಸುಳಿವು ನೀಡಿದ್ದು, ಮುಂದಿನ 5 ದಿನ ರಾಜ್ಯದಾದ್ಯಂತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಬೇಸಿಗೆ ಆರಂಭದಲ್ಲೇ ಜನ ಬಿಸಿಲ ಬೇಗೆಗೆ ಕಂಗೆಟ್ಟಿದ್ದಾರೆ. ಕಳೆದ ಒಂದು ತಿಂಗಳಿನಿಂದ ಸುಡು ಬಿಸಿಲಿಗೆ ಬೆಂದಂತಾಗಿರೋ ಜನಸಾಮಾನ್ಯನಿಗೆ ಸದ್ಯ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಮುಂದಿನ 5 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮಳೆಯ ಸೂಚನೆ ನೀಡಿದೆ.
ಮಧ್ಯಪ್ರದೇಶದಿಂದ ತಮಿಳುನಾಡಿ ನಲ್ಲಿ 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ 5 ದಿನಕಾಲ ಮಳೆ ಇರಲಿದ್ದು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಅದೇ ರೀತಿಯಾಗಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೆ ಬುಧವಾರ ರಾತ್ರಿ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಭಾಗದ ಅನೇಕ ಕಡೆ ಜೋರು ಮಳೆಯಾಗಿದೆ. ಇದರ ಜೊತೆಗೆ ಮುಂದಿನ ಎರಡು ದಿನ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…