ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ -Vishwanews24

ಬೆಂಗಳೂರು: ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯ ಎಂಬ ಕೀರ್ತಿಗೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಭಾಜನವಾಗಿದೆ.

ರಾಜ್ಯದ 10 ಶ್ರೀಮಂತ ದೇವಾಲಯಗಳ ಪಟ್ಟಿಯನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ್ದು, ಬರೋಬ್ಬರಿ 100 ಕೋಟಿ ಆದಾಯ ಗಳಿಸಿರುವ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಅತ್ಯಂತ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ.

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ, ಕಟೀಲು ದುರ್ಗಾ ಪರಮೇಶ್ವರಿ, ಚಾಮುಂಡೇಶ್ವರಿ, ನಂಜನಗೂಡು ಶ್ರೀಕಂಠೇಶ್ವರ, ಸವದತ್ತಿ ಯಲ್ಲವ್ವ, ಮಂದಾರ್ತಿ, ಕೊಪ್ಪಳದ ಗುಳ್ಳಗಮ್ಮ ದೇವಸ್ಥಾನ, ಬೆಂಗಳೂರಿನ ಬನಶಂಕರಿ ದೇವಸ್ಥಾನ ಹಾಗೂ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಕ್ರಮವಾಗಿ ಎರಡರಿಂದ ಹತ್ತನೆ ಸ್ಥಾನ ಪಡೆದುಕೊಂಡಿವೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಳೆದ ವರ್ಷ ಬರೋಬ್ಬರಿ 100 ಕೋಟಿ ಆದಾಯ ಗಳಿಸಿದ್ದರೆ, ಕೊಲ್ಲೂರು ಮೂಕಾಂಬಿಕೆ 92 ಕೋಟಿ, ಕಟೀಲು ದುರ್ಗಾ ಪರಮೇಶ್ವರಿ 40 ರಿಂದ 42 ಕೋಟಿ, ಚಾಮುಂಡೇಶ್ವರಿ ದೇವಸ್ಥಾನ 30 ರಿಂದ 33 ಕೋಟಿ, ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನ 15 ರಿಂದ 20 ಕೋಟಿ, ಸವದತ್ತಿ ಯಲ್ಲವ್ವ 15 ರಿಂದ 17 ಕೋಟಿ,

ಮಂದಾರ್ತಿ 10 ರಿಂದ 12 ಕೋಟಿ, ಗುಳ್ಳಗಮ್ಮ ದೇವಸ್ಥಾನ, ಬೆಂಗಳೂರಿನ ಬನಶಂಕರಿ ಹಾಗೂ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಗಳು 8 ರಿಂದ 10 ಕೋಟಿ ಆದಾಯ ಗಳಿಸಿ ರಾಜ್ಯದ ಅತಿ ಹೆಚ್ಚು ಆದಾಯವಿರುವ ದೇವಸ್ಥಾನಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago