ಬಳ್ಳಾರಿ: ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಹಣ ಹೊಂದಿಸಬೇಕು. ರಾಜ್ಯದ ಅಭಿವೃದ್ಧಿಗಾಗಿ ಪೆಟ್ರೋಲ್-ಡೀಸೆಲ್ ದರ ಏರಿಕೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾತನಾಡಿದ ಅವರು, ಕೇಂದ್ರದವರು ತೈಲ ದರ ಹೆಚ್ಚಿಸಿ ನೂರರ ಗಡಿ ದಾಟಿಸಿದರು. ಆಗ ಮಾಧ್ಯಮದವರು ಸೇರಿ ಯಾರೊಬ್ಬರೂ ಒಂದೇ ಒಂದು ಪ್ರಶ್ನೆ ಮಾಡಲಿಲ್ಲ. ರಾಜ್ಯ ಸರ್ಕಾರ ಹೆಚ್ಚಳ ಮಾಡಿದ್ದಕ್ಕೆ ಎಲ್ಲರೂ ಪ್ರಶ್ನೆ ಮಾಡುತ್ತಿದ್ದೀರಿ. ರಾಜ್ಯದ ಅಭಿವೃದ್ಧಿಗಾಗಿ ಬೆಲೆ ಏರಿಕೆ ಮಾಡಲಾಗಿದೆ. ವಿರೋಧ ಪಕ್ಷ ಬೆಲೆ ಏರಿಕೆ ಬಗ್ಗೆ ಏನಾದರೂ ಹೇಳಲಿ. ಕೇಂದ್ರ ಸರ್ಕಾರ ಮಾಡಿದ ಬೆಲೆ ಏರಿಕೆ ಬಗ್ಗೆ ಏನೂ ಮಾತಾಡಲ್ಲ. ನರೇಂದ್ರ ಮೋದಿ ಬಂದಾಗ ಪೆಟ್ರೋಲ್ ಬೆಲೆ ಎಷ್ಟಿತ್ತು? ಅಂದು ಕೇಂದ್ರ ಸರ್ಕಾರವೇ ಬೆಲೆ ಏರಿಕೆ ಮಾಡಿದೆ. ಮನಮೋಹನ ಸಿಂಗ್ ಅವಧಿ ತಲಾ ಬ್ಯಾರಲ್ ಕಚ್ಚಾ ತೈಲಕ್ಕೆ 113 ಡಾಲರ್ ಇತ್ತು. ಬಿಜೆಪಿ ಅವಧಿಯಲ್ಲಿ 59 ಡಾಲರ್ ಆಯ್ತು, ಯಾರೂ ಪ್ರಶ್ನೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿದರು.
ಇನ್ನೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗೆ ಪ್ರತಿ ವರ್ಷ 60 ಸಾವಿರ ಕೋಟಿ ಕೊಡಬೇಕು. ಗ್ಯಾರಂಟಿಗಳನ್ನು ರದ್ದು ಮಾಡಲಿ ಅಂತಾ ಬಿಜೆಪಿ ಹೇಳಲಿ. ಬಿಜೆಪಿಯವರು ಆರೋಪ ಮಾಡಿದರೆ ವಸ್ತು ಸ್ಥಿತಿ ಮೇಲೆ ಮಾಡಬೇಕು. ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನ ಮಾಧ್ಯಮದವರು ಪ್ರಶ್ನೆ ಮಾಡಿಲ್ಲ. ನರೇಂದ್ರ ಮೋದಿ ಬಂದಾಗ ಲೀಟರ್ ಪೆಟ್ರೋಲ್ 72 ರೂ. ಇತ್ತು. ಈಗ 102 ರೂ. ಆಗಿದೆ. ಕಚ್ಚಾ ತೈಲ ಬೆಲೆ ಕಡಿಮೆ ಆಗಿದೆ. ಇನ್ನೊಂದೆಡೆ ಪೆಟ್ರೋಲ್ ಬೆಲೆ ಜಾಸ್ತಿಯಾಗಿದೆ. ನರೇಂದ್ರ ಮೋದಿ ಅವಧಿಯಲ್ಲಿ ಏನಾಯ್ತು? ಬೆಲೆ ಏರಿಕೆ ಆಗಿದೆ. ನಾವು 3 ರೂ. ಅಭಿವೃದ್ಧಿಗಾಗಿ ಏರಿಕೆ ಮಾಡಿದ್ದೇವೆ. ಪಕ್ಕದ ರಾಜ್ಯಕ್ಕಿಂತಲೂ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…