Featured

ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ರೀತಿಯ ಸೇವೆ ಪ್ರಾರಂಭಿಸಲು ಚಿಂತನೆ -Vishwanews24

ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ರೀತಿಯ ಸೇವೆ ಪ್ರಾರಂಭಿಸಲು ಚಿಂತನೆ -Vishwanews24

ಬೆಂಗಳೂರು: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ರೀತಿಯ ಸೇವೆಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಕೊರೊನಾ ಸಂದರ್ಭ ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಭಕ್ತರ ಪ್ರವೇಶ ನಿಷೇಧ ಹಾಗೂ ಕೆಲವೊಂದು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಅನ್ಲಾಕ್ ಸಂದರ್ಭ ದೇವಸ್ಥಾನಗಳಲ್ಲಿ ಭಕ್ತರಿಗೆ ಕೇವಲ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಆದರೆ ದೇವಸ್ಥಾನಕ್ಕೆ ಭಕ್ತರೆ ಆಗಮಿಸದೆ ರಾಜ್ಯದ ಬೊಕ್ಕಸಕ್ಕೂ ಭಾರೀ ಪ್ರಮಾಣದ ಆದಾಯ ಖೋತಾ ಆಗಿತ್ತು.

ಈಗಾಗಲೇ ಸಪ್ಟೆಂಬರ್ 1 ರಿಂದ ಅನ್ ಲಾಕ್ 4.0 ಜಾರಿಯಾಗುವ ಸಾಧ್ಯತೆ ಇರುವ ಹಿನ್ನಲೆ ಈ ಮೂಲಕ ಭಕ್ತರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್ ದೊರೆತಿದ್ದು, ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಾಮೂಲಿ ಪೂಜೆ ನಡೆಯಲಿದೆ. ಅದು ಕೂಡ ಕೊರೊನಾ ಮಾರ್ಗಸೂಚಿ ಅನ್ವಯವೇ ಎಲ್ಲಾ ಸೇವೆಗಳು ಲಭ್ಯವಾಗಲಿವೆ ಎಂದು ಹೇಳಲಾಗಿದೆ.

ಹೀಗಾಗಿ ಸೆಪ್ಟೆಂಬರ್ 1ರಿಂದಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಈಗಿದ್ದ ಸೀಮಿತ ಸೇವೆಗಳ ಜೊತೆಗೆ ಹೆಚ್ಚುವರಿ ಸೇವೆಗಳ ಆರಂಭ ಮಾಡುವ ಸಾಧ್ಯತೆಯೂ ಇದೆ. ಕ್ಷೀರಾಭಿಷೇಕ, ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಉರುಳು ಸೇವೆ ಹಾಗೂ ಮುಡಿ ಸೇವೆ ಆರಂಭಕ್ಕೆ ಚಿಂತನೆ ಮಾಡಲಾಗಿದೆ. ಈ ವಿಚಾರವನ್ನು ಮುಜರಾಯಿ ಇಲಾಖೆ ಈಗಾಗಲೇ ಸರ್ಕಾರದ ಮುಂದೆ ಪ್ರಸ್ತಾಪ ಮಾಡಿದೆ. ಸರ್ಕಾರ ಒಪ್ಪಿದ್ರೆ ಸದ್ಯದಲ್ಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆಗೆ ಅವಕಾಶ ನೀಡಲಾಗುವುದು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago