ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಂದಿನಿ ತುಪ್ಪ ಕಡ್ಡಾಯ: ಮುಜುರಾಯಿ ಇಲಾಖೆ ಆದೇಶ – vishwanews24
ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಂದಿನಿ ತುಪ್ಪ ಕಡ್ಡಾಯ: ಮುಜುರಾಯಿ ಇಲಾಖೆ ಆದೇಶ
ಬೆಂಗಳೂರು: ತಿರುಪತಿ ಲಡ್ಡು ವಿವಾದ ಜೋರಾಗುತ್ತಿದ್ದಂತೆ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಮುಜುರಾಯಿ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶದಲ್ಲಿ ಸೂಚಿಸಿದ್ದಾರೆ.
ಇಂದು ದೆಹಲಿ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಪ್ರಮಾಣವಚನ ಸ್ವೀಕಾರ – vishwanews24
ಕೆಎಂಎಫ್ ಉತ್ಪನ್ನ ನಂದಿನಿ ತುಪ್ಪದ ಗುಣಮಟ್ಟಕ್ಕೆ ಎಲ್ಲರೂ ಉಘೇ ಉಘೇ ಎನ್ನುತ್ತಿದ್ದಾರೆ. ಬಿಡ್ ವೇಳೆ ಕಡಿಮೆ ದರಕ್ಕೆ ಗುಣಮಟ್ಟದ ನಂದಿನಿ ತುಪ್ಪ ಪೂರೈಸಲಾಗುವುದಿಲ್ಲ ಎಂದು ಹಿಂದೆ ಸರಿದಿದ್ದನ್ನು ತೆಲುಗುದೇಶಂ ಎಂಎಲ್ಸಿ ದೀಪಕ್ ರೆಡ್ಡಿ ನೆನಪಿಸಿಕೊಂಡಿದ್ದಾರೆ.
ತಿರುಮಲ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ರಮಣ ದೀಕ್ಷಿತುಲು ಕೂಡ, ನಂದಿನಿ ತುಪ್ಪದ ಗುಣಮಟ್ಟವನ್ನು ಹೊಗಳಿದ್ದಾರೆ. ಕರ್ನಾಟಕದ ನಂದಿನಿ ತುಪ್ಪವನ್ನು ಲಡ್ಡು ತಯಾರಿಯಲ್ಲಿ ಬಳಸಲು ಮತ್ತೆ ನಿರ್ಧರಿಸಿರುವುದು ಒಳ್ಳೆಯ ಸಂಗತಿ ಎಂದಿದ್ದಾರೆ.
ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು – vishwanews24
