ಬೆಂಗಳೂರು : ನಾನು ಕಂಡಂತೆ ಖಾಸಗಿ ಆಸ್ಪತ್ರೆಗಳಲ್ಲಿ ದೇವಸ್ಥಾನ ಸ್ಥಾಪನೆ ಅಥವಾ ದೇವರ ಮೂರ್ತಿ ಇಡಲಾಗಿರುತ್ತದೆ. ಈ ಮೂಲಕ ಪಾಸಿಟಿವ್ ಎನರ್ಜಿ ಹೆಚ್ಚಾಗುತ್ತದೆ. ಇದೇ ರೀತಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸರ್ವಧರ್ಮೀಯ ದೇವಸ್ಥಾನ ಅಥವಾ ಪ್ರಾರ್ಥನಾ ಸ್ಥಳವನ್ನು ನಿರ್ಮಿಸಬೇಕು ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಸಲಹೆ ಮಾಡಿದ್ದಾರೆ.
ನಗರದ ವಿಕಾಸ ಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು, ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳ ಸಹಿತ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಇನ್ನೂ ಇದೇ ವೇಳೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ದೇವಸ್ಥಾನ ನಿರ್ಮಿಸಿ, ಅದು ಹಿಂದೂ, ಮುಸ್ಲೀಂ, ಕ್ರೈಸ್ತ ಅಥವಾ ಜೈನ ಧರ್ಮದ್ದಾದರೂ ಸರಿ, ಇದರಿಂದ ರಚನಾತ್ಮಕ( ಪಾಸಿಟಿವ್ ಎನರ್ಜಿ) ಬರಲಿದೆ. ನಾನು ನೋಡಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಹೀಗೆ ದೇವಸ್ಥಾನಗಳನ್ನು ನಿರ್ಮಾನ ಮಾಡಲಾಗಿದೆ ಎಂದು ಸಲಹೆ ಮಾಡಿದರು.
ಈ ವೇಳೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು, ಎಲ್ಲಾ ಆರೋಗ್ಯಾಧಿಕಾರಿಗಳು ತಮ್ಮ ಜಿಲ್ಲೆಗಳಲ್ಲಿ ಕನಿಷ್ಠ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗುರುತಿಸಿ, ಅವುಗಳನ್ನು ಮಾದರಿ ಕೇಂದ್ರಗಳನ್ನಾಗಿ ಅಭಿವೃದ್ಧಿ ಪಡಿಸುವಂತೆ ಸೂಚಿಸಿದರು. ಹೀಗೆ ಅಭಿವೃದ್ಧಿ ಪಡಿಸಿದ ಮಾದರಿ ಪ್ರಾಥಮಿಕ ಕೇಂದ್ರಗಳಿಗೆ 3 ಲಕ್ಷ, 2 ಲಕ್ಷ ಮತ್ತು 1 ಲಕ್ಷದಂತೆ ನಗದು ಬಹುಮಾನ ನೀಡಾಲಾಗುತ್ತದೆ ಎಂದು ಘೋಷಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…