ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾಡಿಕೊಂಡಿರುವ ಮೈತ್ರಿಯ ಕಾರಣ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ನಿರತರಾಗಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದೆಲ್ಲೆಡೆ ಬಿಜೆಪಿಗೆ ಅನುಕೂಲಕರವಾದ ವಾತಾವರಣವಿದೆ, ಕಾರಜೋಳ ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದರು.
ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಸಮಾಧಾನಗೊಂಡಿರುವ ಎಲ್ಲರೊಂದಿಗೆ ಮಾತಾಡಿದ್ದೇವೆ, ಒಂದು ಪಕ್ಷವೆಂದ ಮೇಲೆ ಭಿನ್ನಮತ ಇದ್ದೇಇರುತ್ತೆ, ಎಲ್ಲ ಸರಿಹೋಗುತ್ತದೆ ಎಂದು ಹೇಳಿದರು.
ಇನ್ನು ಬಿಜೆಪಿ ಆಡಳಿತದ ವೇಳೆ 40% ಕಮಿಷನ್ ಹೊಡೆದಿದೆ. ಹೀಗಾಗಿ ಮತ ಕೇಳಲು ಬರುವ ಬಿಜೆಪಿ ನಾಯಕರಿಗೆ ಗೋ ಬ್ಯಾಕ್ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿರುವ ವಿಚಾರಕ್ಕೆ ತಿರುಗೇಟು ನೀಡಿದ ಅವರು, ಚುನಾವಣೆ ಮುಗಿದು ಫಲಿತಾಂಶ ಬರಲಿ, ಯಾರು ಗೋ ಬ್ಯಾಕ್ ಯಾರು ಕಮ್ ಬ್ಯಾಕ್ ಅನ್ನೋದು ಗೊತ್ತಾಗಲಿದೆ ಎಂದು ತಿಳಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…