Featured

ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು : ಸಚಿವ ಮುರುಗೇಶ್ ನಿರಾಣಿ – Vishwanews24

ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ ಶಿಪ್‍ಗಳನ್ನು ಸ್ಥಾಪನೆ..

ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡದ ಕೈಗಾರಿಕೆಗಳಿಗೆ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ

ಬೆಂಗಳೂರು: ಹೊಸ ಕೈಗಾರಿಕಾ ನೀತಿ – 2020 – 25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಜೆಡಿಎಸ್‍ನ ಸಿ. ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕಾ ಟೌನ್‍ ಶಿಪ್‍ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್‍ಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಡಾ. ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ ಶಿಪ್‍ಗಳನ್ನು ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

13 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

14 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

15 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

15 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago