ಬೆಂಗಳೂರು : ದೂರದ ಸ್ಥಳಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲವಾಗುವಂತೆ ರಾಜ್ಯದ ಎಲ್ಲ ಭಾಗಗಳಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಗಳು ಸಂಚರಿಸಲಿವೆ. ಈ ಬಗ್ಗೆ ಸಂಬಂಧಪಟ್ಟ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
ಪ್ರೌಢ ಶಾಲೆ 9 ಮತ್ತು 10ನೇ ತರಗತಿಗಳು, ಪಿಯು ತರಗತಿಗಳು ಪುನಾರಂಭವಾಗಿದ್ದು, ಹಾಜರಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಏರುತ್ತಿದೆ. ಹೀಗಾಗಿ, ರಾಜ್ಯದ ಹಲವು ಭಾಗಗಳಲ್ಲಿ ಶಾಲೆ ಸಮಯಕ್ಕೆ ಬಸ್ಗಳು ಸಂಚರಿಸುವುದು ಅತ್ಯಗತ್ಯವಾಗಿದೆ. ಕೋವಿಡ್ ಲಾಕ್ಡೌನ್ ಪೂರ್ವದಲ್ಲಿ ಶಾಲಾ ಅವಧಿಗೆ ಸರಿಯಾಗಿ ಮಕ್ಕಳು ತಲುಪುವಂತೆ ಬಸ್ ಸಂಚರಿಸುತ್ತಿದ್ದವು. ಈಗ ಅದೇ ರೀತಿ ಬಸ್ಗಳು ಸಮಯಕ್ಕೆ ಸರಿಯಾಗಿ ಸಂಚರಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.
ತರಗತಿಗಳ ಅವಧಿಗೆ ಸರಿಯಾಗಿ ಬಸ್ ಸಂಚಾರದಿಂದ ಮಕ್ಕಳ ಹಾಜರಾತಿ ಇನ್ನಷ್ಟು ಹೆಚ್ಚಳವಾಗುತ್ತದೆ. ಬಸ್ಗಳಲ್ಲಿ ಸಂಚರಿಸುವ ಮಕ್ಕಳು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಮಕ್ಕಳು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸಲಹೆ, ಸೂಚನೆಗಳನ್ನು ನಿರ್ವಾಹಕರು ನೀಡುತ್ತಿರಬೇಕು ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
ಇನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರ ಒಳಗಾಗಿ ರಾಜ್ಯದ ಎಲ್ಲಾ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ತಲುಪಿಸುವ ಗುರಿಯನ್ನು ಹೊಂದಿದೆ. ಈಗಾಗಲೇ ಶೇ 50ಕ್ಕಿಂತ ಹೆಚ್ಚು ಪಠ್ಯ ಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ಶೇ 70ಕ್ಕೂ ಹೆಚ್ಚು ಪಠ್ಯ ಪುಸ್ತಕಗಳು ಮುದ್ರಣಗೊಂಡಿದ್ದು, ಸರಬರಾಜಿಗೆ ಸಿದ್ಧವಾಗಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಮೂಲಕ ಶಾಲಾ ಆರಂಭದ ನಂತ್ರ ಪಠ್ಯ ಪುಸ್ತಕಗಳ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…