ಬೆಂಗಳೂರು: ವಿದ್ಯುತ್ ದರ ಏರಿಕೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಚಿಂತನೆ ನಡೆಸಿದೆ.
ಪ್ರತಿ ಯೂನಿಟ್ಗೆ 50-60 ಪೈಸೆ ಏರಿಕೆಗೆ ಎಸ್ಕಾಂಗಳು ಕೆಇಆರ್ಸಿ ಮುಂದೆ ಪ್ರಸ್ತಾವನೆ ಇಟ್ಟಿವೆ. ಇದರಿಂದ ಈ ವರ್ಷ ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಯೂನಿಟ್ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಬೆಸ್ಕಾಂ (BESCOM) ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಇಆರ್ಸಿ ಮುಂದಾಗಿದೆ.
ಸದ್ಯ ಪ್ರಸ್ತಾವನೆ ಪರಿಶೀಲಿಸಲಿರುವ ಆಯೋಗ, ಗ್ರಾಹಕ ಮತ್ತು ಬೆಸ್ಕಾಂ ಇಬ್ಬರಿಗೂ ಹೊರೆಯಾಗದಂತೆ ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ. ಬೆಸ್ಕಾಂ ಮಾತ್ರವಲ್ಲದೇ ಉಳಿದ ನಾಲ್ಕು ಎಸ್ಕಾಂಗಳಿಂದಲೂ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ನಾಲ್ಕು ಎಸ್ಕಾಂಗಳಿಂದ 50-60 ಪೈಸೆ ದರ ಪರಿಷ್ಕರಣೆಗೆ ಪ್ರಸ್ತಾಪ ಸಲ್ಲಿಕೆಯಾಗಿದೆ.
ಎಲ್ಲಾ ಪರಿಷ್ಕೃತ ದರಗಳು ಏಪ್ರಿಲ್ 1 ರಿಂದಲೇ ಜಾರಿಯಾಗುವ ಸಾಧ್ಯತೆ ಇದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…