ಬೆಂಗಳೂರು : ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಆ ಮೂಲಕ ಕಳೆದ ಹಲವು ದಿನಗಳಿಂದ ಯಾರಾಕ್ತಾರೆ ರಾಜ್ಯದ ಮುಂದಿನ ಸಿಎಂ ಎನ್ನುವ ಚರ್ಚೆಗೆ ತೆರೆ ಬಿದ್ದಂತಾಗಿದೆ.
ವಯಸ್ಸಿನ ಕಾರಣವನ್ನು ಮುಂದಿಟ್ಟುಕೊಂಡು ಬಿ.ಎಸ್. ಯಡಿಯೂರಪ್ಪ ಅವರಿಂದ ಪಕ್ಷ ರಾಜೀನಾಮೆ ಪಡೆದುಕೊಂಡಿತ್ತು. ಅದರಂತೆ ಜುಲೈ 26ರಂದು ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ರಾಜ್ಯದ ಮುಂದಿನ ಸಿಎಂ ಯಾರಾಗ್ತಾರೆ ಎನ್ನುವ ಚರ್ಚೆಗಳು ನಡೆಯುತ್ತಿತ್ತು. ಜಾತಿವಾರು ಲೆಕ್ಕಾಚಾರಗಳ ಪ್ರಕಾರ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದವು. ಆದರೆ, ಇದೀಗ ಕಡೇ ಗಳಿಗೆಯಲ್ಲಿ ಬಸವರಾಜ್ ಬೊಮ್ಮಾಯಿಯವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿಯವರನ್ನು ಆಯ್ಕೆ ಮಾಡಲಾಗಿದೆ.
ಶಾಸಕಾಂಗ ಸಭೆಯಲ್ಲಿ ಯಡಿಯೂರಪ್ಪವರು ಬಸವರಾಜ್ ಬೊಮ್ಮಾಯಿಯವರ ಹೆಸರು ಪ್ರಸ್ತಾಪಿಸಿದರು. ಗೋವಿಂದ ಕಾರಜೋಳ ಅನುಮೋದಿಸುವ ಮೂಲಕ ಬೊಮ್ಮಾಯಿಯವರು ನೂತನ ಸಿಎಂ ಆಗಿ ಹೊರ ಹೊಮ್ಮಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…