ಮೂಡುಬಿದಿರೆ: ರಾಜ್ಯದ ನೆರೆ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ₹ 50 ಲಕ್ಷ ಪರಿಹಾರ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸೋಮವಾರ ಇಲ್ಲಿ ಪ್ರಕಟಿಸಿದರು.
2019-20 ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಇತರ ಸಾಮಾಜಿಕ ಚಟುವಟಿಕೆಗಳಿಗೆ ₹33.85 ಕೋಟಿಯ ವಿವಿಧ ‘ಕೊಡುಗೆ’ಗಳ ವಿವಿರವನ್ನು ನೀಡಿ ಅವರು ಮಾತನಾಡಿದರು.
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳನ್ನು ಸಮಾಜದ ಆಸ್ತಿಯಾಗಿ ರೂಪಿಸುವ ಡಾ.ಎಂ.ಮೋಹನ ಆಳ್ವರ ಯೋಜನೆಗಳು ಶ್ಲಾಘನೀಯ. ಈ ನಿಟ್ಟಿನಲ್ಲಿ ಈ ವರ್ಷ ₹33.85 ಕೋಟಿ ಶಿಕ್ಷಣ ಹಾಗೂ ಸಮಾಜ ಸೇವೆಗೆ ವ್ಯಯಿಸುತ್ತಿದ್ದಾರೆ. ನಿಮ್ಮ ಒಳ್ಳೆಯ ಕಾರ್ಯಗಳಿಗೆ ನಮ್ಮ ಬೆಂಬಲ ಇದೆ’ ಎಂದರು.
ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ , ‘ಸಮಗ್ರ ಶಿಕ್ಷಣ ಪರಿಕಲ್ಪನೆಯ ಶಿಕ್ಷಣವು ಆಳ್ವಾಸ್ ಮೂಲಕ ಸಿಗುತ್ತಿರುವುದು ಆಶಾದಾಯಕ ಬೆಳವಣಿಗೆ’ ಎಂದರು.
ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಕೆ.ಅಭಯಚಂದ್ರ ಜೈನ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಇದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…