ಮೂಡುಬಿದಿರೆ: ರಾಜ್ಯದ ನೆರೆ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ₹ 50 ಲಕ್ಷ ಪರಿಹಾರ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸೋಮವಾರ ಇಲ್ಲಿ ಪ್ರಕಟಿಸಿದರು.
2019-20 ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಇತರ ಸಾಮಾಜಿಕ ಚಟುವಟಿಕೆಗಳಿಗೆ ₹33.85 ಕೋಟಿಯ ವಿವಿಧ ‘ಕೊಡುಗೆ’ಗಳ ವಿವಿರವನ್ನು ನೀಡಿ ಅವರು ಮಾತನಾಡಿದರು.
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳನ್ನು ಸಮಾಜದ ಆಸ್ತಿಯಾಗಿ ರೂಪಿಸುವ ಡಾ.ಎಂ.ಮೋಹನ ಆಳ್ವರ ಯೋಜನೆಗಳು ಶ್ಲಾಘನೀಯ. ಈ ನಿಟ್ಟಿನಲ್ಲಿ ಈ ವರ್ಷ ₹33.85 ಕೋಟಿ ಶಿಕ್ಷಣ ಹಾಗೂ ಸಮಾಜ ಸೇವೆಗೆ ವ್ಯಯಿಸುತ್ತಿದ್ದಾರೆ. ನಿಮ್ಮ ಒಳ್ಳೆಯ ಕಾರ್ಯಗಳಿಗೆ ನಮ್ಮ ಬೆಂಬಲ ಇದೆ’ ಎಂದರು.
ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ , ‘ಸಮಗ್ರ ಶಿಕ್ಷಣ ಪರಿಕಲ್ಪನೆಯ ಶಿಕ್ಷಣವು ಆಳ್ವಾಸ್ ಮೂಲಕ ಸಿಗುತ್ತಿರುವುದು ಆಶಾದಾಯಕ ಬೆಳವಣಿಗೆ’ ಎಂದರು.
ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಕೆ.ಅಭಯಚಂದ್ರ ಜೈನ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಇದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…