ರಾಜ್ಯದ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌ – vishwanews24

Featured, ರಾಜ್ಯ ನ್ಯೂಸ್

ರಾಜ್ಯದ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕರ್ನಾಟಕದಲ್ಲಿ ಕೂಡ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆಗಳಿಗೆ ಅನುಗುಣವಾಗಿ ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ರಾಜ್ಯ ಗೃಹ ಇಲಾಖೆ ಮಾಡಿಕೊಂಡಿದೆ.

ಈ ಸಮಯದಲ್ಲಿ ರಾಜ್ಯದ ಪೊಲೀಸರಿಗೆ ಹೆಚ್ಚಿನ ರಜೆ ಇರುವುದಿಲ್ಲ ಅಂತ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಸದ್ಯ ಪೊಲೀಸರಿಗೆ ಯಾವುದೇ ಹೆಚ್ಚುವರಿ ರಜೆಯನ್ನು ನೀಡುವುದಿಲ್ಲ ಅಂತ ತಿಳಿಸಿದ ಅವರು ಯಾವಾಗ ಏನು ಆಗುತ್ತದೋ ಯಾರಿಗೂ ತಿಳಿದಿಲ್ಲ, ಕೋಸ್ಟಲ್‌ ಗಾರ್ಡ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಅಂತ ಅವರು ಇದೇ ವೇಳೇ ತಿಳಿಸಿದರು.

ಮಂಗಳೂರು : ಮೇ 16ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಲೋಕಾರ್ಪಣೆ – vishwanews24

Leave a Reply