ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸ್ ಪೇದೆಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಪೇದೆಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಅರ್ಹ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಂತರ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳ ಬಗ್ಗೆ ಕ್ರಮ ಕೈಗೊಂಡು, ಆ ಬಗ್ಗೆ ತಮಗೆ ವರದಿ ನೀಡುವಂತೆಯೂ ಗೃಹ ಸಚಿವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದಲ್ಲಿ ನಿರ್ದೇಶಿಸಿಸಿದ್ದಾರೆ.
ಅಂದಹಾಗೇ ಕಳೆದ ಮೂರು ವರ್ಷಗಳಿಂದ ಪೊಲೀಸ್ ಪೇದೆಗಳ ವರ್ಗಾವಣೆ ನಡೆದಿಲ್ಲ. ಈ ಸಂಬಂಧ ಗೃಹ ಸಚಿವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮಗೆ ದಯಾಮರಣ ನೀಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಪೊಲೀಸ್ ಪೇದೆಯೊಬ್ಬರು ಬರೆದಂತ ಪತ್ರ ವೈರಲ್ ಆಗಿತ್ತು. ಈ ಬೆನ್ನಲ್ಲೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ಸೂಚನೆ ನೀಡಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…