ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರದ ಅವ್ಯವಹಾರಗಳನ್ನು ಬಯಲಿಗೆಳೆಯಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಇಡೀ ವರ್ಷ ಹೋರಾಟ ನಡೆಸಲಾಗುವುದು. ಸರ್ಕಾರದ ತೆರಿಗೆ ಹೆಚ್ಚಳ ನೀತಿಯ ವಿರುದ್ಧ ನಿರಂತರ ಧ್ವನಿ ಎತ್ತಲಾಗುವುದು ಎಂದು ಕೆಪಿಸಿಸ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿಬಿಎಂಪಿ ವಿರುದ್ಧ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, 2021ನ್ನು ಹೋರಾಟ ಮತ್ತು ಸಂಘಟನಾತ್ಮಕ ವರ್ಷ ಎಂದು ಘೋಷಣೆ ಮಾಡಿದ್ದೇವೆ. ಹೀಗಾಗಿ ಪ್ರತಿ ಕ್ಷೇತ್ರಕ್ಕೂ ಭೇಟಿ ನೀಡಿ, ಅಲ್ಲಿ ಸ್ಥಳೀಯವಾಗಿ ಜನರ ಸಮಸ್ಯೆಗಳನ್ನು ಆಲಿಸಿ, ಅದನ್ನು ಬಗೆಹರಿಸಲು ಪ್ರತಿಭಟನೆ ಮಾಡುತ್ತೇವೆ. ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ. ಸರ್ಕಾರಕ್ಕೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ ಸರ್ಕಾರದಲ್ಲಿ ಎಲ್ಲದಕ್ಕೂ ಲಂಚ ಕೊಡಬೇಕಿದೆ. ಕಚೇರಿಯ ಬಾಗಿಲು ಮುಟ್ಟಲೂ ಒಂದು ರೇಟ್ ಫಿಕ್ಸ್ ಆಗಿದೆ. ಕೊರೊನಾ ಸಂದರ್ಭದಲ್ಲಂತೂ ಲೂಟಿ ಹೊಡೆಯಲಾಗಿದೆ. ಕೊರೊನಾ ಸಂದರ್ಭದಲ್ಲಿ ವ್ಯಾಪಾರ ವಹಿವಾಟುಗಳು ಮುಚ್ಚಿ ಹೋಗಿವೆ. ಉದ್ಯೋಗ ವಿಲ್ಲದೆ ಜನ ತತ್ತರಿಸಿ ಹೋಗಿದ್ದಾರೆ. ಲಾಕ್ ಡೌನ್, ಸೀಲ್ ಡೌನ್ ಹೆಸರಿನಲ್ಲಿ ಮತ್ತಷ್ಟು ತೊಂದರೆ ಮಾಡಲಾಗಿದೆ. ಬ್ಯಾಂಕ್ ಮೂಲಕ ಸಹಾಯ ಮಾಡುವುದಾಗಿ ಹೇಳಲಾಗಿತ್ತು. ಆದರೆ, ಈವರೆಗೂ ಯಾರಿಗೂ ನೆರವು ಸಿಕ್ಕಿಲ್ಲ ಎಂದು ಅವರು ಆರೋಪಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…