ರಾಜ್ಯದ ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ಲಾಕ್ ಡೌನ್ ವಿಶೇಷ ಆರ್ಥಿಕ ಪ್ಯಾಕೇಜ್ ನಿಮ್ಮ ಖಾತೆಗೆ ಜಮೆ – Vishwanews24
ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್.14ರವರೆಗೆ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಿದ್ದಲ್ಲದೇ, 500 ಕೋಟಿ ವಿಶೇಷ 2ನೇ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದರಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೂ 2 ಸಾವಿರ ರೂಪಾಯಿ ಆರ್ಥಿಕ ಪರಿಹಾರವನ್ನು ಘೋಷಿಸಿದ್ದರು. ಇಂತಹ ವಿಶೇಷ ಆರ್ಥಿಕ ಪ್ಯಾಕೇಜ್ ಹಣ, ಬೀದಿ ಬದಿಯ ವ್ಯಾಪಾರಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಇಂದಿನಿಂದ ಜಮೆ ಆಗಲಿದೆ.
ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ನಿವಾಸದಲ್ಲಿ, ಬೀದಿ ಬದಿಯ ವ್ಯಾಪಾರಿಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಹಣ ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ 2.20 ಲಕ್ಷ ಬೀದಿ ಬದಿಯ ವ್ಯಾಪಾರಿಗಳಿಗೆ ಡಿಬಿಟಿ ಮೂಲಕ, ನೇರವಾಗಿ ಅವರ ಬ್ಯಾಂಕ್ ಖಾತೆಗೆ ಇಂದಿನಿಂದ ಜಮೆಗೊಳ್ಳಲಿದೆ.
ಸಿಎಂ ಯಡಿಯೂರಪ್ಪ ಬೀದಿ ಬದಿಯ ವ್ಯಾಪಾರಿಗಳಿಗೂ ವಿಶೇಷ ಆರ್ಥಿಕ ಪ್ಯಾಕೇಜ್ ಆಗಿ 2 ಸಾವಿರ ನೀಡೋದಾಗಿ ಘೋಷಣೆಯನ್ನು ಮಾಡಿದ್ದರು. ಇದರಿಂದಾಗಿ 2.20 ಲಕ್ಷ ಬೀದಿ ಬದಿಯ ವ್ಯಾಪಾರಿಗಳಿಗೆ ಸಹಾಯ ಆಗಲಿದೆ. ಇದಕ್ಕಾಗಿ 44 ಕೋಟಿ ಹಣ ವ್ಯಯವಾಗಲಿದೆ ಎಂದಿದ್ದರು. ಇಂತಹ ಹಣವನ್ನು ಬೀದಿ ಬದಿಯ ವ್ಯಾಪಾರಿಗಳ ಖಾತೆಗೆ ಡಿಬಿಟಿ ಮೂಲಕ, ಇಂದಿನಿಂದ ಜಮೆ ಮಾಡೋದಕ್ಕೆ ಶುರುವಾಗಲಿದೆ. ಈ ಮೂಲಕ ಸಿಹಿಸುದ್ದಿ ದೊರೆಯಲಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…