ರಾಜ್ಯದ ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ಲಾಕ್ ಡೌನ್ ವಿಶೇಷ ಆರ್ಥಿಕ ಪ್ಯಾಕೇಜ್ ನಿಮ್ಮ ಖಾತೆಗೆ ಜಮೆ – Vishwanews24
ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್.14ರವರೆಗೆ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಿದ್ದಲ್ಲದೇ, 500 ಕೋಟಿ ವಿಶೇಷ 2ನೇ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದರಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೂ 2 ಸಾವಿರ ರೂಪಾಯಿ ಆರ್ಥಿಕ ಪರಿಹಾರವನ್ನು ಘೋಷಿಸಿದ್ದರು. ಇಂತಹ ವಿಶೇಷ ಆರ್ಥಿಕ ಪ್ಯಾಕೇಜ್ ಹಣ, ಬೀದಿ ಬದಿಯ ವ್ಯಾಪಾರಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಇಂದಿನಿಂದ ಜಮೆ ಆಗಲಿದೆ.
ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ನಿವಾಸದಲ್ಲಿ, ಬೀದಿ ಬದಿಯ ವ್ಯಾಪಾರಿಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಹಣ ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ 2.20 ಲಕ್ಷ ಬೀದಿ ಬದಿಯ ವ್ಯಾಪಾರಿಗಳಿಗೆ ಡಿಬಿಟಿ ಮೂಲಕ, ನೇರವಾಗಿ ಅವರ ಬ್ಯಾಂಕ್ ಖಾತೆಗೆ ಇಂದಿನಿಂದ ಜಮೆಗೊಳ್ಳಲಿದೆ.
ಸಿಎಂ ಯಡಿಯೂರಪ್ಪ ಬೀದಿ ಬದಿಯ ವ್ಯಾಪಾರಿಗಳಿಗೂ ವಿಶೇಷ ಆರ್ಥಿಕ ಪ್ಯಾಕೇಜ್ ಆಗಿ 2 ಸಾವಿರ ನೀಡೋದಾಗಿ ಘೋಷಣೆಯನ್ನು ಮಾಡಿದ್ದರು. ಇದರಿಂದಾಗಿ 2.20 ಲಕ್ಷ ಬೀದಿ ಬದಿಯ ವ್ಯಾಪಾರಿಗಳಿಗೆ ಸಹಾಯ ಆಗಲಿದೆ. ಇದಕ್ಕಾಗಿ 44 ಕೋಟಿ ಹಣ ವ್ಯಯವಾಗಲಿದೆ ಎಂದಿದ್ದರು. ಇಂತಹ ಹಣವನ್ನು ಬೀದಿ ಬದಿಯ ವ್ಯಾಪಾರಿಗಳ ಖಾತೆಗೆ ಡಿಬಿಟಿ ಮೂಲಕ, ಇಂದಿನಿಂದ ಜಮೆ ಮಾಡೋದಕ್ಕೆ ಶುರುವಾಗಲಿದೆ. ಈ ಮೂಲಕ ಸಿಹಿಸುದ್ದಿ ದೊರೆಯಲಿದೆ.
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…