Featured

ರಾಜ್ಯದ ಮತ್ತೊಂದು ಸ್ಫೋಟಕ ಸಂಗತಿ ಬಯಲು

ಬೆಂಗಳೂರು : ಕಾಂಗ್ರೆಸ್ಸಿನ ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನದಲ್ಲಿ ಮಹಾರಾಷ್ಟ್ರದ ಕಂದಾಯ ಸಚಿವ ಚಂದ್ರಕಾಂತ್‌ ಪಾಟೀಲ್‌ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ ಜಿಲ್ಲೆಯ ಪಕ್ಕದ ಗಡಿ ಭಾಗದಲ್ಲಿರುವ ಕೊಲ್ಲಾಪುರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಚಂದ್ರಕಾಂತ್‌ ಪಾಟೀಲ್‌ ಅವರೊಂದಿಗೆ ಜಾರಕಿಹೊಳಿ ಸಹೋದರರು ಅದರಲ್ಲೂ ರಮೇಶ್‌ ಜಾರಕಿಹೊಳಿ ಅವರು ಹಲವು ವರ್ಷಗಳಿಂದ ಆತ್ಮೀಯ ಸಂಬಂಧ ಹೊಂದಿದ್ದಾರೆ. ಹೀಗಾಗಿಯೇ ಬಿಜೆಪಿ ನಾಯಕರು ಅವರ ಮೂಲಕವೇ ರಮೇಶ್‌ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಆದರೆ, ಈ ಪ್ರಕ್ರಿಯೆಯಲ್ಲಿ ಬಿಜೆಪಿ ವರಿಷ್ಠರ ಪಾತ್ರ ಇತ್ತೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿ ಗೊತ್ತಾಗಿಲ್ಲ. ರಮೇಶ್‌ ಜಾರಕಿಹೊಳಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂಬ ಅನುಮಾನವಿದ್ದು, ಅದು ಸಚಿವ ಚಂದ್ರಕಾಂತ್‌ ಪಾಟೀಲ್‌ ಅವರ ಮೂಲಕವೇ ಆಗಿದೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿ ರಾಜಕಾರಣಕ್ಕೂ ಮತ್ತು ಮಹಾರಾಷ್ಟ್ರದ ರಾಜಕಾರಣಕ್ಕೂ ಅವಿನಾಭಾವ ಸಂಬಂಧ ಇದೆ. ಬೆಳಗಾವಿಯ ಬಿಜೆಪಿ ಮತ್ತು ಕಾಂಗ್ರೆಸ್ಸಿನ ಬಹುತೇಕ ಎಲ್ಲ ಪ್ರಮುಖ ಮುಖಂಡರೂ ಮಹಾರಾಷ್ಟ್ರದ ರಾಜಕಾರಣಿಗಳೊಂದಿಗೆ ಪಕ್ಷಾತೀತವಾಗಿ ಉತ್ತಮ ಸಂಬಂಧ ಹೊಂದಿದ್ದಾರೆ. ಉದ್ಯಮಗಳಲ್ಲೂ ಪರೋಕ್ಷವಾಗಿ ಪಾಲುದಾರಿಕೆ ಹೊಂದಿದ್ದಾರೆ ಎನ್ನುವುದು ಗುಟ್ಟಿನ ವಿಷಯವೇನಲ್ಲ.

ರಮೇಶ್‌ ಜಾರಕಿಹೊಳಿ ಅವರು ಮಹಾರಾಷ್ಟ್ರದಲ್ಲೂ ಉದ್ಯಮ ವಿಸ್ತರಿಸಲು ಚಂದ್ರಕಾಂತ್‌ ಪಾಟೀಲ್‌ ಸೇರಿದಂತೆ ಅನೇಕ ಬಿಜೆಪಿ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದಾರೆ. ಇದನ್ನೇ ಬಳಸಿಕೊಂಡ ರಾಜ್ಯ ಬಿಜೆಪಿ ನಾಯಕರು ಜಾರಕಿಹೊಳಿ ಅವರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ. ರಾಜ್ಯ ಬಿಜೆಪಿಯ ಹಿರಿಯ ಮುಖಂಡ ಬಿ.ಶ್ರೀರಾಮುಲು ಅವರೇ ಜಾರಕಿಹೊಳಿ ಅವರನ್ನು ಸೆಳೆಯಲು ಪ್ರಮುಖ ಕಾರಣ ಎಂದು ಬಿಂಬಿತಗೊಳ್ಳುತ್ತಿದ್ದರೂ ತೆರೆಮರೆಯಲ್ಲಿ ಇದಕ್ಕೆ ವೇದಿಕೆ ಸಿದ್ಧಪಡಿಸಿದ್ದು ಮಹಾರಾಷ್ಟ್ರದ ಸಚಿವ ಚಂದ್ರಕಾಂತ್‌ ಪಾಟೀಲ್‌. ಅವರ ಮೂಲಕವೇ ಕಾಂಗ್ರೆಸ್‌ ತೊರೆದು ಬಿಜೆಪಿಗೆ ವಲಸೆ ಬಂದರೆ ಏನೇನು ಸ್ಥಾನಮಾನ ನೀಡಬಹುದು ಎಂಬ ಸಂದೇಶ ರವಾನಿಸಲಾಗಿದೆ ಎಂದು ವಿಶ್ವಸನೀಯ ಮೂಲಗಳು ಮಾಹಿತಿ ನೀಡಿವೆ.

ಈ ಕಾರಣಕ್ಕಾಗಿಯೇ ರಮೇಶ್‌ ಜಾರಕಿಹೊಳಿ ಅವರು ಕಳೆದ ಹಲವು ದಿನಗಳಿಂದ ಕಾಂಗ್ರೆಸ್‌ ವಿರುದ್ಧ ಬಂಡಾಯ ಸಾರಿದ್ದಾರೆ. ಈಗ ಮೇಲ್ನೋಟಕ್ಕೆ ಶಮನಗೊಂಡಂತೆ ಕಂಡು ಬಂದರೂ ಮತ್ತೆ ಸ್ಫೋಟಗೊಳ್ಳಬಹುದು ಎಂಬುದು ಬಿಜೆಪಿ ನಾಯಕರ ನಿರೀಕ್ಷೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago