Featured

ರಾಜ್ಯದ ಮತ್ತೊಂದು ಸ್ಫೋಟಕ ಸಂಗತಿ ಬಯಲು

ಬೆಂಗಳೂರು : ಕಾಂಗ್ರೆಸ್ಸಿನ ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನದಲ್ಲಿ ಮಹಾರಾಷ್ಟ್ರದ ಕಂದಾಯ ಸಚಿವ ಚಂದ್ರಕಾಂತ್‌ ಪಾಟೀಲ್‌ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ ಜಿಲ್ಲೆಯ ಪಕ್ಕದ ಗಡಿ ಭಾಗದಲ್ಲಿರುವ ಕೊಲ್ಲಾಪುರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಚಂದ್ರಕಾಂತ್‌ ಪಾಟೀಲ್‌ ಅವರೊಂದಿಗೆ ಜಾರಕಿಹೊಳಿ ಸಹೋದರರು ಅದರಲ್ಲೂ ರಮೇಶ್‌ ಜಾರಕಿಹೊಳಿ ಅವರು ಹಲವು ವರ್ಷಗಳಿಂದ ಆತ್ಮೀಯ ಸಂಬಂಧ ಹೊಂದಿದ್ದಾರೆ. ಹೀಗಾಗಿಯೇ ಬಿಜೆಪಿ ನಾಯಕರು ಅವರ ಮೂಲಕವೇ ರಮೇಶ್‌ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಆದರೆ, ಈ ಪ್ರಕ್ರಿಯೆಯಲ್ಲಿ ಬಿಜೆಪಿ ವರಿಷ್ಠರ ಪಾತ್ರ ಇತ್ತೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿ ಗೊತ್ತಾಗಿಲ್ಲ. ರಮೇಶ್‌ ಜಾರಕಿಹೊಳಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂಬ ಅನುಮಾನವಿದ್ದು, ಅದು ಸಚಿವ ಚಂದ್ರಕಾಂತ್‌ ಪಾಟೀಲ್‌ ಅವರ ಮೂಲಕವೇ ಆಗಿದೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿ ರಾಜಕಾರಣಕ್ಕೂ ಮತ್ತು ಮಹಾರಾಷ್ಟ್ರದ ರಾಜಕಾರಣಕ್ಕೂ ಅವಿನಾಭಾವ ಸಂಬಂಧ ಇದೆ. ಬೆಳಗಾವಿಯ ಬಿಜೆಪಿ ಮತ್ತು ಕಾಂಗ್ರೆಸ್ಸಿನ ಬಹುತೇಕ ಎಲ್ಲ ಪ್ರಮುಖ ಮುಖಂಡರೂ ಮಹಾರಾಷ್ಟ್ರದ ರಾಜಕಾರಣಿಗಳೊಂದಿಗೆ ಪಕ್ಷಾತೀತವಾಗಿ ಉತ್ತಮ ಸಂಬಂಧ ಹೊಂದಿದ್ದಾರೆ. ಉದ್ಯಮಗಳಲ್ಲೂ ಪರೋಕ್ಷವಾಗಿ ಪಾಲುದಾರಿಕೆ ಹೊಂದಿದ್ದಾರೆ ಎನ್ನುವುದು ಗುಟ್ಟಿನ ವಿಷಯವೇನಲ್ಲ.

ರಮೇಶ್‌ ಜಾರಕಿಹೊಳಿ ಅವರು ಮಹಾರಾಷ್ಟ್ರದಲ್ಲೂ ಉದ್ಯಮ ವಿಸ್ತರಿಸಲು ಚಂದ್ರಕಾಂತ್‌ ಪಾಟೀಲ್‌ ಸೇರಿದಂತೆ ಅನೇಕ ಬಿಜೆಪಿ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದಾರೆ. ಇದನ್ನೇ ಬಳಸಿಕೊಂಡ ರಾಜ್ಯ ಬಿಜೆಪಿ ನಾಯಕರು ಜಾರಕಿಹೊಳಿ ಅವರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ. ರಾಜ್ಯ ಬಿಜೆಪಿಯ ಹಿರಿಯ ಮುಖಂಡ ಬಿ.ಶ್ರೀರಾಮುಲು ಅವರೇ ಜಾರಕಿಹೊಳಿ ಅವರನ್ನು ಸೆಳೆಯಲು ಪ್ರಮುಖ ಕಾರಣ ಎಂದು ಬಿಂಬಿತಗೊಳ್ಳುತ್ತಿದ್ದರೂ ತೆರೆಮರೆಯಲ್ಲಿ ಇದಕ್ಕೆ ವೇದಿಕೆ ಸಿದ್ಧಪಡಿಸಿದ್ದು ಮಹಾರಾಷ್ಟ್ರದ ಸಚಿವ ಚಂದ್ರಕಾಂತ್‌ ಪಾಟೀಲ್‌. ಅವರ ಮೂಲಕವೇ ಕಾಂಗ್ರೆಸ್‌ ತೊರೆದು ಬಿಜೆಪಿಗೆ ವಲಸೆ ಬಂದರೆ ಏನೇನು ಸ್ಥಾನಮಾನ ನೀಡಬಹುದು ಎಂಬ ಸಂದೇಶ ರವಾನಿಸಲಾಗಿದೆ ಎಂದು ವಿಶ್ವಸನೀಯ ಮೂಲಗಳು ಮಾಹಿತಿ ನೀಡಿವೆ.

ಈ ಕಾರಣಕ್ಕಾಗಿಯೇ ರಮೇಶ್‌ ಜಾರಕಿಹೊಳಿ ಅವರು ಕಳೆದ ಹಲವು ದಿನಗಳಿಂದ ಕಾಂಗ್ರೆಸ್‌ ವಿರುದ್ಧ ಬಂಡಾಯ ಸಾರಿದ್ದಾರೆ. ಈಗ ಮೇಲ್ನೋಟಕ್ಕೆ ಶಮನಗೊಂಡಂತೆ ಕಂಡು ಬಂದರೂ ಮತ್ತೆ ಸ್ಫೋಟಗೊಳ್ಳಬಹುದು ಎಂಬುದು ಬಿಜೆಪಿ ನಾಯಕರ ನಿರೀಕ್ಷೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

3 hours ago