Featured

ರಾಜ್ಯದ ‘ಮಧುಮೇಹ’ಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ‘ಸರ್ಕಾರಿ ಆಸ್ಪತ್ರೆ’ಯಲ್ಲಿ ‘ಗ್ರೀನ್ ಲೇಸರ್ ಶಸ್ತ್ರಚಿಕಿತ್ಸೆ’ಆರಂಭ – Vishwanews24

ರಾಜ್ಯದ ‘ಮಧುಮೇಹ’ಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ‘ಸರ್ಕಾರಿ ಆಸ್ಪತ್ರೆ’ಯಲ್ಲಿ ‘ಗ್ರೀನ್ ಲೇಸರ್ ಶಸ್ತ್ರಚಿಕಿತ್ಸೆ’ಆರಂಭ

ಬೆಂಗಳೂರು : ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಗುರಿಯನ್ನು ಮೀರಿ ಶೇ.126 ರಷ್ಟು ಸಾಧನೆಯನ್ನು ರಾಜ್ಯ ಸರ್ಕಾರ ಮಾಡಿದೆ. ಜೊತೆಗೆ, ಮಧುಮೇಹದಿಂದ  ಬಳಲುತ್ತಿರುವವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗ್ರೀನ್‌ ಲೇಸರ್‌ ಚಿಕಿತ್ಸೆ ಆರಂಭಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌  ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಪ್ರಸಕ್ತ ವರ್ಷ 3,39,600 ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳನ್ನು ನಡೆಸುವ ಗುರಿ ನೀಡಿತ್ತು. ಈಗಾಗಲೇ 4,28,451 ಶಸ್ತ್ರಚಿಕಿತ್ಸೆ ಮಾಡಿ ಒಟ್ಟಾರೆ ಶೇ.126 ರಷ್ಟು ಸಾಧನೆ ಮಾಡಲಾಗಿದೆ. ಎನ್.ಜಿ.ಒ, ವೈದ್ಯಕೀಯ ಕಾಲೇಜುಗಳು, ಇತರೆ ವಲಯಗಳಲ್ಲಿಯೂ ಉತ್ತಮ ಸಾಧನೆಯಾಗಿದೆ. ರಾಜ್ಯದಲ್ಲಿ ಅಂಧತ್ವ ನಿವಾರಣೆ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತಿದೆ ಎಂದು ಸಚಿವರು ವಿವರಿಸಿದ್ದಾರೆ.

ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಅನೇಕರು ಡಯಾಬಿಟಿಕ್ ರೆಟಿನೋಪತಿ ಸಮಸ್ಯೆಗೆ ಒಳಗಾಗುತ್ತಿದ್ದು, ಇದಕ್ಕಾಗಿ ಅತ್ಯಾಧುನಿಕ ಗ್ರೀನ್ ಲೇಸರ್ ಚಿಕಿತ್ಸೆ ಪರಿಚಯಿಸಲಾಗಿದೆ. ವಿಜಯಪುರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನೇತ್ರ ತಜ್ಞರು ವಿಶೇಷ ಪರಿಣತಿ ಪಡೆದು ಇಂತಹ ವಿನೂತನ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಮಾಡುತ್ತಿದ್ದಾರೆ. ಇದರಿಂದ ಉತ್ತಮ ಫಲಿತಾಂಶ ದೊರೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಬೇರೆ ಆಸ್ಪತ್ರೆಗಳಿಗೆ ವಿಸ್ತರಿಸಲು ಕ್ರಮ

ಮಧುಮೇಹದಿಂದ ರೆಟಿನೋಪತಿ ಸಮಸ್ಯೆಗೆ ಒಳಗಾದರೆ ಕ್ರಮೇಣ ದೃಷ್ಟಿಗೆ ಹಾನಿಯಾಗುವ ಸಂಭವ ಇರುತ್ತದೆ. ಇದನ್ನು ಪತ್ತೆ ಮಾಡಿ ಅಗತ್ಯ ಕಂಡುಬಂದಲ್ಲಿ ಗ್ರೀನ್ ಲೇಸರ್ ಚಿಕಿತ್ಸೆ ನೀಡಿ ಸಮಸ್ಯೆ ಪರಿಹರಿಸಬಹುದಾಗಿದೆ. ಡಯಾಬಿಟಿಕ್ ರೆಟಿನೋಪತಿಗೆ ಒಳಗಾದವರಿಗೆ ಎಷ್ಟು ಬೆಳಕಿದ್ದರೂ ಕಾಣುವುದಿಲ್ಲ. ವಿಜಯಪುರ ಜಿಲ್ಲೆಯಲ್ಲಿ ಒಂದು ತಿಂಗಳಿಂದ 40 ಕ್ಕೂ ಹೆಚ್ಚು ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಚಿಕಿತ್ಸೆಯನ್ನು ಇತರೆ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು. ಗ್ರಾಮೀಣ ಭಾಗದಲ್ಲಿ ರೋಗಿಗಳನ್ನು ಪರಿಶೀಲನೆ ಮಾಡಿ ಚಿಕಿತ್ಸೆ ಅಗತ್ಯವಿರುವವರನ್ನು ಜಿಲ್ಲಾ ಹಂತಕ್ಕೆ ರೆಫರ್ ಮಾಡಲಾಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ಹೇಳಿದ್ದಾರೆ.

ಇದರ ಜೊತೆಗೆ, ‘ಬಳ್ಳಾರಿ ಅಂಧತ್ವ ಮುಕ್ತ ಜಿಲ್ಲೆ’ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಬಳ್ಳಾರಿ ಜಿಲ್ಲೆಯ ಪ್ರತಿಯೊಂದು ತಾಲ್ಲೂಕುಗಳಲ್ಲಿ ವಿಶೇಷ ಸಂಚಾರಿ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ವಿಶೇಷ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಶಿಬಿರದಲ್ಲಿ ಸರಾಸರಿ 22 ಮಂದಿಗೆ ಶಸ್ತ್ರಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಂಚಾರಿ ಆರೋಗ್ಯ ಘಟಕದಿಂದ ತಪಾಸಣೆ ಶಿಬಿರ ನಡೆಸಲಾಗುತ್ತಿದೆ. ಬಳ್ಳಾರಿ, ಸಂಡೂರು, ಸಿರುಗುಪ್ಪದಲ್ಲಿ ಪ್ರತಿ ತಿಂಗಳು ಎರಡು ಶಿಬಿರ ನಡೆಯುತ್ತಿದೆ. ಶೇ.98 ರಷ್ಟು ಬಿಪಿಎಲ್ ಕುಟುಂಬದ ಸದಸ್ಯರು ಚಿಕಿತ್ಸೆ ಪಡೆಯುತ್ತಿದ್ದು, ಶೇ.60 ರಿಂದ 70 ರಷ್ಟು ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಾರಿ 22 ಮಂದಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಈ ಪೈಕಿ 17 ಮಹಿಳೆಯರು ಮತ್ತು ಐವರು ಪುರುಷರಾಗಿದ್ದಾರೆ. ಅಂಧತ್ವ ಮುಕ್ತ ಬಳ್ಳಾರಿ ಅಭಿಯಾನದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಉಚಿತ ಕನ್ನಡಕ, ಕ್ಯಾಟರಾಕ್ಟ್‌ ಸರ್ಜರಿ ಮಾಡಲಾಗುತ್ತಿದೆ. ಈವರೆಗೆ 12,668 ಮಂದಿಗೆ ನೇತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 hour ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 hour ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 hour ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

4 hours ago