ರಾಜ್ಯದ ಮುಖ್ಯಮಂತ್ರಿಗಳಿಗೆ ತಮ್ಮ‌ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಮುಖ್ಯವಾಗಿಲ್ಲ : ಡಿ ಕೆ ಶಿವಕುಮಾರ್ – Vishwanews24

ರಾಜ್ಯದ ಮುಖ್ಯಮಂತ್ರಿಗಳಿಗೆ ತಮ್ಮ‌ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಮುಖ್ಯವಾಗಿಲ್ಲ : ಡಿ ಕೆ ಶಿವಕುಮಾರ್ – Vishwanews24

ಕೊಪ್ಪಳ: ರಾಜ್ಯದ ಮುಖ್ಯಮಂತ್ರಿಗಳಿಗೆ ತಮ್ಮ‌ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸರ್ಕಾರದ ವಿರುದ್ದ ಗುಡುಗಿದರು.

ಕೊಪ್ಪಳ ತಾಲೂಕಿನ ಹಿಟ್ನಾಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ ಬೆಲೆ ಸಿಗುತ್ತಿಲ್ಲ. ಈಗಿರುವ ಭತ್ತದ ಬೆಲೆ ಜೊತೆಗೆ ಹೆಚ್ಚುವರಿ 500 ರೂ ಬೆಲೆ ಹೆಚ್ಚಳ ಮಾಡಬೇಕು. ಪ್ರತ ದಿನವೂ ಬೆಲೆ ಏರಿಕೆ ಆಗುತ್ತಿದೆ. ಈಗ ವಿದ್ಯುತ್ ಸಹ ಹೆಚ್ಚಳ ಮಾಡಲಾಗಿದೆ. ಸರ್ಕಾರ ಭತ್ತಕ್ಕೆ ಹೆಚ್ಚುವರಿ 500 ರೂ ಬೆಂಬಲ ಬೆಲೆ ಘೋಷಣೆ ಮಾಡಬೇಕು. 40 ಪೈಸೆ ವಿದ್ಯುತ್ ಶುಲ್ಕ ಹೆಚ್ಚಳ ಮಾಡಿದ್ದು, ಕೋವಿಡ್ ವರ್ಷದಲ್ಲಿ ಜನರು ತುಂಬ ಸಂಕಷ್ಟ ಎದುರಿಸುತ್ತಿದ್ದಾರೆ.‌ ಕೂಡಲೇ ಶುಲ್ಕ ಇಳಿಕೆ ಮಾಡುವ ಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.

ರೈತ ಬೆಲೆ ಇಲ್ಲದೆ ಕಂಗಾಲಾಗಿದ್ದಾನೆ. ಮುಖ್ಯಮಂತ್ರಿಗಳು ಮೊದಲು ರೈತರನ್ನು ಉಳಿಸಲು ಆಧ್ಯತೆ ನೀಡಲಿ, ಮೆಕ್ಕೆಜೋಳದ ಬೆಲೆಯೂ ಸಂಪೂರ್ಣ ಕುಸಿದಿದೆ. ಕೂಡಲೇ ಖರೀದಿ ಕೇಂದ್ರ ಆರಂಭ ಮಾಡಲಿ ಎಂದರು.

ಬಿಜೆಪಿ ಜಾತಿ ಜಾತಿಗಳನ್ನು ಕೂಡಿಸುವುದನ್ನು ಬಿಟ್ಟು ಒಡೆಯುವ ಕೆಲಸ ಮಾಡುತ್ತಿದೆ.‌ ಮರಾಠ ಅಭಿವೃದ್ಧಿ ನಿಗಮ‌ ಸ್ಥಾಪನೆ ಮಾಡಿದ್ದಾರೆ. ಹೀಗೆ ಜಾತಿಗೊಂದು ನಿಗಮ ಮಾಡಲು ಹೊರಟಿದ್ದಾರೆ. ರೈತರ ಬೆಳೆಗೆ ಬೆಂಬಲ ಬೆಲೆ ಸೇರಿ ನಿಗಮಗಳ ಕುರಿತಂತೆ ಸುದೀರ್ಘ ಚರ್ಚೆ ನಡೆಸಲು ನ.30 ರಂದು ಹಿರಿಯರ ಸಭೆ ಕರೆದಿದ್ದೇನೆ. ಸಭೆಯಲ್ಲಿ ಹಲವು ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ ಎಂದರು.

ಕಾಂಗ್ರೆಸ್ ನಿಂದ‌ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್ ಗೆ ಬರ್ತಾರೆ ಎಂದರಲ್ಲದೇ, ಸರ್ಕಾರ ಶಾಲೆಗಳ ಆರಂಭದ ಕುರಿತು ಚರ್ಚೆ ನಡೆಸುತ್ತಿದೆ. ಅವರು ಏನು ನಿರ್ಧಾರ ಕೈಗೊಳ್ತಾರೋ ನೋಡೋಣ. ನಮ್ಮ ಅಭಿಪ್ರಾಯವನ್ನ ಅವರು ಕೇಳಿಲ್ಲ. ಈ ಹಿಂದೆ ಒಂದು ಬಾರಿ ನಮ್ಮ ಸಲಹೆ ಕೇಳಿದ್ದರು.‌ ಶಾಲೆ ಆರಂಭದ ಕುರಿತು ಸರ್ಕಾರದ ನಿರ್ಧಾರದ ಮೇಲೆ ನಾವು ತೀರ್ಮಾನ ಹೇಳುತ್ತೇವೆ ಎಂದರು.

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಣ್ಣ ಅಂತರದಿಂದ ಸೋತ ಬಸವನಗೌಡ ತುರ್ವಿಹಾಳ ಅವರನ್ನು ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದೇವೆ. ಎಲ್ಲರೂ ಚುನಾವಣಾ ತಯಾರಿ ನಡೆಸಲು ಸಿದ್ದರಾಗಿದ್ದಾರೆ ಎಂದರು.

ಈ ವೇಳೆ ಶಾಸಕರಾದ ಅಮರೆಗೌಡ ಬಯ್ಯಾಪುರ, ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ವಿ ಎ ಸಂಸದ ವಿ ಎಸ್ ಉಗ್ರಪ್ಪ ಸೇರಿ ಹಲವರು ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

17 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago