ರಾಜ್ಯದ ಮುಖ್ಯಮಂತ್ರಿಗಳಿಗೆ ತಮ್ಮ‌ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಮುಖ್ಯವಾಗಿಲ್ಲ : ಡಿ ಕೆ ಶಿವಕುಮಾರ್ – Vishwanews24

ರಾಜ್ಯದ ಮುಖ್ಯಮಂತ್ರಿಗಳಿಗೆ ತಮ್ಮ‌ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಮುಖ್ಯವಾಗಿಲ್ಲ : ಡಿ ಕೆ ಶಿವಕುಮಾರ್ – Vishwanews24

ಕೊಪ್ಪಳ: ರಾಜ್ಯದ ಮುಖ್ಯಮಂತ್ರಿಗಳಿಗೆ ತಮ್ಮ‌ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸರ್ಕಾರದ ವಿರುದ್ದ ಗುಡುಗಿದರು.

ಕೊಪ್ಪಳ ತಾಲೂಕಿನ ಹಿಟ್ನಾಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ ಬೆಲೆ ಸಿಗುತ್ತಿಲ್ಲ. ಈಗಿರುವ ಭತ್ತದ ಬೆಲೆ ಜೊತೆಗೆ ಹೆಚ್ಚುವರಿ 500 ರೂ ಬೆಲೆ ಹೆಚ್ಚಳ ಮಾಡಬೇಕು. ಪ್ರತ ದಿನವೂ ಬೆಲೆ ಏರಿಕೆ ಆಗುತ್ತಿದೆ. ಈಗ ವಿದ್ಯುತ್ ಸಹ ಹೆಚ್ಚಳ ಮಾಡಲಾಗಿದೆ. ಸರ್ಕಾರ ಭತ್ತಕ್ಕೆ ಹೆಚ್ಚುವರಿ 500 ರೂ ಬೆಂಬಲ ಬೆಲೆ ಘೋಷಣೆ ಮಾಡಬೇಕು. 40 ಪೈಸೆ ವಿದ್ಯುತ್ ಶುಲ್ಕ ಹೆಚ್ಚಳ ಮಾಡಿದ್ದು, ಕೋವಿಡ್ ವರ್ಷದಲ್ಲಿ ಜನರು ತುಂಬ ಸಂಕಷ್ಟ ಎದುರಿಸುತ್ತಿದ್ದಾರೆ.‌ ಕೂಡಲೇ ಶುಲ್ಕ ಇಳಿಕೆ ಮಾಡುವ ಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.

ರೈತ ಬೆಲೆ ಇಲ್ಲದೆ ಕಂಗಾಲಾಗಿದ್ದಾನೆ. ಮುಖ್ಯಮಂತ್ರಿಗಳು ಮೊದಲು ರೈತರನ್ನು ಉಳಿಸಲು ಆಧ್ಯತೆ ನೀಡಲಿ, ಮೆಕ್ಕೆಜೋಳದ ಬೆಲೆಯೂ ಸಂಪೂರ್ಣ ಕುಸಿದಿದೆ. ಕೂಡಲೇ ಖರೀದಿ ಕೇಂದ್ರ ಆರಂಭ ಮಾಡಲಿ ಎಂದರು.

ಬಿಜೆಪಿ ಜಾತಿ ಜಾತಿಗಳನ್ನು ಕೂಡಿಸುವುದನ್ನು ಬಿಟ್ಟು ಒಡೆಯುವ ಕೆಲಸ ಮಾಡುತ್ತಿದೆ.‌ ಮರಾಠ ಅಭಿವೃದ್ಧಿ ನಿಗಮ‌ ಸ್ಥಾಪನೆ ಮಾಡಿದ್ದಾರೆ. ಹೀಗೆ ಜಾತಿಗೊಂದು ನಿಗಮ ಮಾಡಲು ಹೊರಟಿದ್ದಾರೆ. ರೈತರ ಬೆಳೆಗೆ ಬೆಂಬಲ ಬೆಲೆ ಸೇರಿ ನಿಗಮಗಳ ಕುರಿತಂತೆ ಸುದೀರ್ಘ ಚರ್ಚೆ ನಡೆಸಲು ನ.30 ರಂದು ಹಿರಿಯರ ಸಭೆ ಕರೆದಿದ್ದೇನೆ. ಸಭೆಯಲ್ಲಿ ಹಲವು ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ ಎಂದರು.

ಕಾಂಗ್ರೆಸ್ ನಿಂದ‌ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್ ಗೆ ಬರ್ತಾರೆ ಎಂದರಲ್ಲದೇ, ಸರ್ಕಾರ ಶಾಲೆಗಳ ಆರಂಭದ ಕುರಿತು ಚರ್ಚೆ ನಡೆಸುತ್ತಿದೆ. ಅವರು ಏನು ನಿರ್ಧಾರ ಕೈಗೊಳ್ತಾರೋ ನೋಡೋಣ. ನಮ್ಮ ಅಭಿಪ್ರಾಯವನ್ನ ಅವರು ಕೇಳಿಲ್ಲ. ಈ ಹಿಂದೆ ಒಂದು ಬಾರಿ ನಮ್ಮ ಸಲಹೆ ಕೇಳಿದ್ದರು.‌ ಶಾಲೆ ಆರಂಭದ ಕುರಿತು ಸರ್ಕಾರದ ನಿರ್ಧಾರದ ಮೇಲೆ ನಾವು ತೀರ್ಮಾನ ಹೇಳುತ್ತೇವೆ ಎಂದರು.

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಣ್ಣ ಅಂತರದಿಂದ ಸೋತ ಬಸವನಗೌಡ ತುರ್ವಿಹಾಳ ಅವರನ್ನು ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದೇವೆ. ಎಲ್ಲರೂ ಚುನಾವಣಾ ತಯಾರಿ ನಡೆಸಲು ಸಿದ್ದರಾಗಿದ್ದಾರೆ ಎಂದರು.

ಈ ವೇಳೆ ಶಾಸಕರಾದ ಅಮರೆಗೌಡ ಬಯ್ಯಾಪುರ, ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ವಿ ಎ ಸಂಸದ ವಿ ಎಸ್ ಉಗ್ರಪ್ಪ ಸೇರಿ ಹಲವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago