Featured

ರಾಜ್ಯದ ಯಾವುದೇ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಳಸುವಂತಿಲ್ಲ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಬೆಂಗಳೂರು: ದೇವಸ್ಥಾನದಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಕಂಡು ಬರುತ್ತಿರುವುದರಿಂದ ಇದಕ್ಕೆ ಬ್ರೇಕ್ ಹಾಕಲು ಮುಜರಾಯಿ ಇಲಾಖೆ ಮುಂದಾಗಿದೆ.

ಮುಜರಾಯಿ ಇಲಾಖೆಯ ದೇಗುಲದಲ್ಲಿ ನೈಸರ್ಗಿಕ ಕುಂಕುಮ, ಶ್ರೀಗಂಧ ಬಳಸುವಂತೆ ರಾಜ್ಯ ಸರಕಾರ ಸೂಚನೆ ನೀಡಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಸುತ್ತಿರುವ ಬಗ್ಗೆ ಭಕ್ತರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ.

ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ ಸಮಸ್ಯೆ ಗಳಿಗೂ ಕಾರಣವಾಗುತ್ತದೆ. ನಿರ್ಲಕ್ಷಿಸಿದರೆ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಿಂದ ಅಲರ್ಜಿ (ಬಿಂದಿ ಡರ್ಮಟೈಟಿಸ್‌) ಉಂಟಾಗುವ ಸಾಧ್ಯತೆ ಇದೆ. ಇದರಿಂದ ಕುಂಕುಮ ಹಚ್ಚಿ ಕೊಂಡ ಭಾಗದಲ್ಲಿ ಕೆರೆತ, ಸಣ್ಣ ನೀರಿನ ಗುಳ್ಳೆ ಕಾಣಿಸಿಕೊಳ್ಳಬಹುದು. ಇಂತಹ ಕುಂಕುಮಗಳಿಂದ ಜೀವಕಣ ಗಳು ನಾಶವಾಗಿ ಕ್ರಮೇಣ ಆ ಭಾಗ ಬೆಳ್ಳಗಾಗಲಿದೆ ಎಂದು ಚರ್ಮರೋಗ ತಜ್ಞರು ಹೇಳುತ್ತಾರೆ.

ಶುದ್ಧ ನೈಸರ್ಗಿಕವಾದ ಗಂಧ, ಕುಂಕುಮವನ್ನು ದೇವರ ಅರ್ಚನೆಗೆ ಬಳಸಬೇಕು. ಹಾಗೂ ಭಕ್ತರಿಗೂ ಇದನ್ನೇ ನೀಡಬೇಕು ಎಂದು ನಿರ್ದೇಶಿಸಲಾಗಿದೆ. ಈ ಬಗ್ಗೆ ಶೀಘ್ರದಲ್ಲೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ 36 ಸಾವಿರ ದೇವಸ್ಥಾನಗಳಿವೆ. ಈ ಪೈಕಿ 15 ಸಾವಿರ ದೇಗುಲಗಳಿಗೆ ಉತ್ತಮ ಆದಾಯವಿದೆ. ಇಂತಹ ಪ್ರತಿಷ್ಠಿತ ದೇಗುಲಗಳಿಗೆ ಭಕ್ತಾದಿಗಳೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಿಂದ ಚರ್ಮಕ್ಕೆ ಸಂಬಂಧಪಟ್ಟಂತೆ ಅಲರ್ಜಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಭಕ್ತರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯದ ಯಾವುದೇ ದೇವಸ್ಥಾನದಲ್ಲಿಯೂ ರಾಸಾಯನಿಕ ಯುಕ್ತವಾದಂತ ಕುಂಕುಮ ಮಾರಾಟವನ್ನು ಮಾರಾಟಗಾರರು ಇಂದಿನಿಂದ ನಿಲ್ಲಿಸಬೇಕು. ಒಂದು ವೇಳೆ ಗಮನಕ್ಕೆ ಬಂದರೇ ಅಂತಹ ಮಾರಾಟಗಾರರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ರಾಸಾಯನಿಕ ಯುಕ್ತ ಶ್ರೀಗಂಧ ಕೂಡ ಮಾಡಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ್ದಲ್ಲದೇ, ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago