ಬೆಂಗಳೂರು: ಕೆ ಎಸ್ ಆರ್ ಟಿ ಸಿಯಿಂದ 2022ನೇ ಸಾಲಿಗೆ ವಿಕಲಚೇತನರಿಂದ ರಿಯಾಯಿತಿ ದರದ ಬಸ್ ಪಾಸ್ ಗಾಗಿ ಅರ್ಜಿಯನ್ನು ಆಹ್ವಾನಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು , 2022ನೇ ಸಾಲಿಗೆಗಾಗಿ ದಿನಾಂಕ 01-01-2022 ರಿಂದ 31-12-2022ರವೆರೆಗೆ ಮಾನ್ಯತೆ ಇರುವಂತೆ ವಿಕಲಚೇತನರಿಗೆ ಬಸ್ ಪಾಸ್ ವಿತರಿಸಬೇಕಿದೆ.
ಹೀಗಾಗಿ ಬಸ್ ಪಾಸ್ ಗಾಗಿ ಅರ್ಜಿಯನ್ನು ಆಹ್ವಾನಿಸಿರೋದಾಗಿ ತಿಳಿಸಿದೆ.
ವಿಕಲಚೇತನರು ರಿಯಾಯಿತಿದರದ ಬಸ್ ಪಾಸ್ ಗಾಗಿ ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. 2021ನೇ ಸಾಲಿನಲ್ಲಿ ವಿತರಿಸಲಾಗಿರುವ ಮತ್ತು ದಿನಾಂಕ 31-12-2021ರವರೆಗೆ ಮಾನ್ಯತೆ ಇರೋ ಬಸ್ ಪಾಸ್ ಗಳನ್ನು ದಿನಾಂಕ 28-02-2022ರವರೆಗೆ ಮಾತ್ಯತೆ ಮಾಡಲಾಗುವುದು ಎಂದು ಹೇಳಿದೆ.
ದಿನಾಂಕ 17-01-2022ರಿಂದ ಹೊಸ ಬಸ್ ಪಾಸ್ ವಿತರಿಸಲಾಗುತ್ತದೆ. ನವೀಕರಣ ಮತ್ತು ನೂತನ ಪಾಸುಗಳಿಗೆ ರೂ.660 ಶುಲ್ಕವನ್ನು ನಿಗದಿಪಡಿಸಲಾಗಿದೆ. ಇದನ್ನು ನಗದಾಗಿ ಇಲ್ಲವೇ ಡಿಡಿ ಮೂಲಕ ಪಾವತಿಸಬಹುದಾಗಿದೆ ಎಂದು ತಿಳಿಸಿದೆ.
ದಿನಾಂಕ 28-02-2022ರವರೆಗೆ 2021ನೇ ಸಾಲಿನಲ್ಲಿ ವಿತರಿಸಲಾಗಿರುವ ವಿಕಲಚೇತನರ ಪಾಸುಗಳ ನವೀಕರಣಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಅದರಕ್ಕೂ ಮುನ್ನವೇ ವಿಕಲಚೇತನರು ಸೇವಾ ಸಿಂಧು ಪೋರ್ಟಲ್ ನಲ್ಲಿ ಹೊಸ ಹಾಗೂ ನವೀಕೃತ ರಿಯಾಯಿತಿ ದರದ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿ ಪಡೆಯುವಂತೆ ಕೆ ಎಸ್ ಆರ್ ಟಿ ಸಿ ತಿಳಿಸಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…