Featured

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ – vishwanews24

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ʼ ಬಳಕೆ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೊಬೈಲ್ ಉಪಯೋಗ ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಇದು ಶಾಲಾ ಕಾಲೇಜುಗಳಲ್ಲಿಯ ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದ್ದು, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಬಂದಿದೆ. ಅಲ್ಲದೇ ವಿದ್ಯಾರ್ಥಿಗಳು ಕ್ಲಾಸಿನಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವು ಹಾಗೂ ಎಸ್‌ಎಂಎಸ್ ಕಳುಹಿಸುವುದು ಮಾಡುತ್ತಿದ್ದು, ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಇದರೊಂದಿಗೆ ಅನೇಕ ಪಾಲಕ-ಪೋಷಕರು ಕೂಡಾ ಅನೇಕ ಸಂದರ್ಭಗಳಲ್ಲಿ ಆತಂಕ ವ್ಯಕ್ತಪಡಿಸಿರುತ್ತಾರೆಂಬ ಅಂಶ ಸಭೆಯಲ್ಲಿ ಚರ್ಚೆಯಾಗಿ ಮಕ್ಕಳ ಕಲಿಕಾ ಸಮಯದ ರಕ್ಷಣೆಯ ಕ್ರಮವಾಗಿ ಮೊಬೈಲ್ ಉಪಯೋಗವನ್ನು ನಿಷೇದಿಸಬೇಕೆಂಬ ಒಟ್ಟಾರೆ ಅಭಿಪ್ರಾಯ ಈ ಸಭೆಯಲ್ಲಿ ವ್ಯಕ್ತವಾಗಿರುತ್ತದೆ. ಆದ್ದರಿಂದ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ (1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ. ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು. ಈ ನಿಷೇದವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಜವಾಬ್ದಾರಿ/ಅಧಿಕಾರ ವ್ಯಾಪ್ತಿ ನಿಗಧಿಪಡಿಸಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

8 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

9 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

9 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

9 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

10 hours ago