ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು (ಜೆಎಕೆ) ಮುಚ್ಚುವಂತೆ ನಿರ್ದೇಶಿಸಿ ಕಳೆದ ಮೇ 14 ರಂದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಎಲ್. ರಾಕೇಶ್ ಮಹಾಲಿಂಗಪ್ಪ ಮತ್ತಿತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೇ, ಬಡವರಿಗೆ ನೀಡಲಾಗುವ ಔಷಧಗಳನ್ನು ಉಚಿತವಾಗಿ ನೀಡಲಾಗುತ್ತಿರಲಿ ಅಥವಾ ಕಡಿಮೆ ಬೆಲೆಗೆ ನೀಡುತ್ತಿರಲಿ, ಅದರಲ್ಲಿ ಸರ್ಕಾರದ ಒಂದು ವಿಭಾಗವು ಹಸ್ತಕ್ಷೇಪ ಮಾಡಲು ನಾವು ಅನುಮತಿ ನೀಡುವುದಿಲ್ಲ ಎಂದು ಮೌಖಿಕವಾಗಿ ಹೇಳಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ರಾಜ್ಯ ಸರ್ಕಾರವೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧವನ್ನು ಪೂರೈಸಲು ನಿರ್ಧರಿಸಿದೆ ಮತ್ತು ಆದ್ದರಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳ ಕಾರ್ಯಾಚರಣೆ ಅನಿವಾರ್ಯವಲ್ಲ. ಅಲ್ಲದೇ, ಔಷಧ ಕೇಂದ್ರಗಳು ಹೊರಗೆ ಕಾರ್ಯನಿರ್ವಹಿಸುವುದಕ್ಕೆ ಯಾವುದೇ ತೊಂದರೆ ಇಲ್ಲ. ಆದರೆ, ಸರ್ಕಾರಿ ಆಸ್ಪತ್ರೆ ಆವರಣದೊಳಗೆ ಮಾತ್ರ ಈ ಕೇಂದ್ರಗಳ ಕಾರ್ಯಾಚರಣೆಯನ್ನು ನಿಲ್ಲಿಸಲು ಆದೇಶಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಅರ್ಜಿದಾರರ ಪರ ವಕೀಲರು, ಜನೌಷಧ ಕೇಂದ್ರಗಳ ಮಾಲೀಕರ ಜತೆ ಸಮಾಲೋಚಿಸದೇ ಅಥವಾ ಎಚ್ಚರಿಕೆ ನೀಡದೆ ತರಾತುರಿಯಲ್ಲಿ ಸರ್ಕಾರ ಈ ಆದೇಶ ಜಾರಿಗೊಳಿಸಿದೆ. ಇದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಒಂದು ಸಣ್ಣ ಕೇಂದ್ರವು ಉಚಿತ ಔಷಧ ವಿತರಣೆಗೆ ಅಡ್ಡಿಯಾಗುತ್ತಿದೆ ಎಂದು ಸರ್ಕಾರ ಹೇಳುವುದನ್ನು ಒಪ್ಪಲಾಗದು. ಸರ್ಕಾರ ಮೊದಲಿಂದಲೂ ಉಚಿತವಾಗಿ ಔಷಧ ನೀಡುತ್ತಿದೆ. ಕೇಂದ್ರಗಳಿಂದ ಸರ್ಕಾರ ಉದ್ದೇಶಕ್ಕೆ ಅಡ್ಡಿಯಾಗುತ್ತಿಲ್ಲ. ಸರ್ಕಾರ ಮತ್ತು ಅರ್ಜಿದಾರರಿಬ್ಬರೂ ಸಹ ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿವೆ ಎಂದು ಪೀಠಕ್ಕೆ ತಿಳಿಸಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…