Featured

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ್ದ ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್​- vishwanews24

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ್ದ ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್​

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು (ಜೆಎಕೆ) ಮುಚ್ಚುವಂತೆ ನಿರ್ದೇಶಿಸಿ ಕಳೆದ ಮೇ 14 ರಂದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿ ಆದೇಶಿಸಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಎಲ್‌. ರಾಕೇಶ್‌ ಮಹಾಲಿಂಗಪ್ಪ ಮತ್ತಿತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೇ, ಬಡವರಿಗೆ ನೀಡಲಾಗುವ ಔಷಧಗಳನ್ನು ಉಚಿತವಾಗಿ ನೀಡಲಾಗುತ್ತಿರಲಿ ಅಥವಾ ಕಡಿಮೆ ಬೆಲೆಗೆ ನೀಡುತ್ತಿರಲಿ, ಅದರಲ್ಲಿ ಸರ್ಕಾರದ ಒಂದು ವಿಭಾಗವು ಹಸ್ತಕ್ಷೇಪ ಮಾಡಲು ನಾವು ಅನುಮತಿ ನೀಡುವುದಿಲ್ಲ ಎಂದು ಮೌಖಿಕವಾಗಿ ಹೇಳಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ರಾಜ್ಯ ಸರ್ಕಾರವೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧವನ್ನು ಪೂರೈಸಲು ನಿರ್ಧರಿಸಿದೆ ಮತ್ತು ಆದ್ದರಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳ ಕಾರ್ಯಾಚರಣೆ ಅನಿವಾರ್ಯವಲ್ಲ. ಅಲ್ಲದೇ, ಔಷಧ ಕೇಂದ್ರಗಳು ಹೊರಗೆ ಕಾರ್ಯನಿರ್ವಹಿಸುವುದಕ್ಕೆ ಯಾವುದೇ ತೊಂದರೆ ಇಲ್ಲ. ಆದರೆ, ಸರ್ಕಾರಿ ಆಸ್ಪತ್ರೆ ಆವರಣದೊಳಗೆ ಮಾತ್ರ ಈ ಕೇಂದ್ರಗಳ ಕಾರ್ಯಾಚರಣೆಯನ್ನು ನಿಲ್ಲಿಸಲು ಆದೇಶಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಅರ್ಜಿದಾರರ ಪರ ವಕೀಲರು, ಜನೌಷಧ ಕೇಂದ್ರಗಳ ಮಾಲೀಕರ ಜತೆ ಸಮಾಲೋಚಿಸದೇ ಅಥವಾ ಎಚ್ಚರಿಕೆ ನೀಡದೆ ತರಾತುರಿಯಲ್ಲಿ ಸರ್ಕಾರ ಈ ಆದೇಶ ಜಾರಿಗೊಳಿಸಿದೆ. ಇದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಒಂದು ಸಣ್ಣ ಕೇಂದ್ರವು ಉಚಿತ ಔಷಧ ವಿತರಣೆಗೆ ಅಡ್ಡಿಯಾಗುತ್ತಿದೆ ಎಂದು ಸರ್ಕಾರ ಹೇಳುವುದನ್ನು ಒಪ್ಪಲಾಗದು. ಸರ್ಕಾರ ಮೊದಲಿಂದಲೂ ಉಚಿತವಾಗಿ ಔಷಧ ನೀಡುತ್ತಿದೆ. ಕೇಂದ್ರಗಳಿಂದ ಸರ್ಕಾರ ಉದ್ದೇಶಕ್ಕೆ ಅಡ್ಡಿಯಾಗುತ್ತಿಲ್ಲ. ಸರ್ಕಾರ ಮತ್ತು ಅರ್ಜಿದಾರರಿಬ್ಬರೂ ಸಹ ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿವೆ ಎಂದು ಪೀಠಕ್ಕೆ ತಿಳಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago