Featured

ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ – vishwanews24

ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಇದು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51 ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ಸುಮಾರು 251 ತಿಂಡಿ ಹೋಟೆಲ್, ಅಂಗಡಿಗಳಿಂದ ಸ್ಯಾಂಪಲ್ಸ್ ಪಡೆಯಲಾಗಿತ್ತು. ಅವುಗಳ ಪೈಕಿ 51 ಕಡೆ ಸಂಗ್ರಹಿಸಿದ್ದ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಪ್ಲಾಸ್ಟಿಕ್​ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ ಕಾರ್ಸಿನೋಜೆನಿಕ್ ಅಂಶ ಕ್ಯಾನ್ಸರ್​​ಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್‌ ಬಳಕೆ ಮಾಡಲಾಗುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಆರೋಗ್ಯ ಇಲಾಖೆ ಅನೇಕ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಆ ಪೈಕಿ ಸುಮಾರು 50 ರಷ್ಟು ಸ್ಯಾಂಪಲ್ಸ್​ ವರದಿ ಬಂದಿದ್ದು, ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಉಳಿದ ಸ್ಯಾಂಪಲ್ಸ್​​ ವರದಿಗಾಗಿ ಕಾಯಲಾಗುತ್ತಿದೆ.

Vishwa News 24

Recent Posts

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

11 minutes ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

17 minutes ago

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

30 minutes ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

37 minutes ago

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…

45 minutes ago

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 hours ago