ರಾಜ್ಯದ 2 ಕಡೆ ಕಲಬೆರಕೆ ತುಪ್ಪ : ಆಹಾರ ಸುರಕ್ಷತಾ ಇಲಾಖೆ ಟೆಸ್ಟ್ ನಲ್ಲಿ ಬಹಿರಂಗ – vishwanews24

Featured, ರಾಜ್ಯ ನ್ಯೂಸ್

ರಾಜ್ಯದ 2 ಕಡೆಗಳಲ್ಲಿ ತುಪ್ಪ ಸುರಕ್ಷಿತವಲ್ಲ: ಆಹಾರ ಸುರಕ್ಷತಾ ಇಲಾಖೆ ಟೆಸ್ಟ್ ನಲ್ಲಿ ಬಹಿರಂಗ

ಬೆಂಗಳೂರು: ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಹಿರಂಗವಾಗಿದೆ.

ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನು ಪರೀಕ್ಷೆಗೊಳಪಡಿಸಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿದ ಆಹಾರ ಮತ್ತು ಸುರಕ್ಷತಾ ಇಲಾಖೆ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ತುಪ್ಪ ಸುರಕ್ಷಿತವಲ್ಲ ಎಂದು ವರದಿ ನೀಡಿದೆ.

ಉಡುಪಿ : ಸೆಪ್ಟೆಂಬರ್ 28 ಮತ್ತು 29ರಂದು ದಸರಾ ಕ್ರೀಡಾಕೂಟ – vishwanews24

ಎಲ್ಲಿಯ ತುಪ್ಪ ಸೇಫ್ ಅಲ್ಲ ಎಂಬ ವರದಿ ಬಂದಿರುವ ಕಡೆ ತುಪ್ಪ ತಯಾರಿಕಾ ಘಟಕಕ್ಕೆ ಆಹಾರ ಮತ್ತು ಸುರಕ್ಷತಾ ಇಲಾಖೆ ನೋಟಿಸ್ ನೀಡಿದೆ. 30 ದಿನಗಳ ಒಳಗೆ ತುಪ್ಪ ಅಸುರಕ್ಷತೆ ಅಲ್ಲ ಎಂದು ಸಾಬೀತುಪಡಿಸಲು ಆಹಾರ ಮತ್ತು ಸುರಕ್ಷತಾ ಇಲಾಖೆ ಸೂಚನೆ ನೀಡಿದೆ.

ಇದೀಗ ದೇಶಾದ್ಯಂತ ತಿರುಪತಿ ಲಡ್ಡು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಇನ್ನು ತಿರುಪತಿ ಲಡ್ಡಿಗೆ ಕಳಪೆ ಗುಣಮಟ್ಟದ ತುಪ್ಪ, ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದ ನಂದಿನಿ ತುಪ್ಪ ಹೊರತುಪಡಿಸಿ, ಉಳಿದ ತುಪ್ಪಗಳನ್ನು ಟೆಸ್ಟ್ ಮಾಡಲು ಆರೋಗ್ಯ ಸಚಿವರು ಸೂಚಿಸಿದ್ದರು.

ಉಡುಪಿ : ಬಿಲ್ ಪಾವತಿ ಬಾಕಿಯಿಂದ ಜಿಲ್ಲಾಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಸೇವೆ ವ್ಯತ್ಯಯ ; ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಯಶ್ಪಾಲ್ ಸುವರ್ಣ ಆಗ್ರಹ – vishwanews24

Leave a Reply