ಬೆಂಗಳೂರು: ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಹಿರಂಗವಾಗಿದೆ.
ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನು ಪರೀಕ್ಷೆಗೊಳಪಡಿಸಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿದ ಆಹಾರ ಮತ್ತು ಸುರಕ್ಷತಾ ಇಲಾಖೆ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ತುಪ್ಪ ಸುರಕ್ಷಿತವಲ್ಲ ಎಂದು ವರದಿ ನೀಡಿದೆ.
ಎಲ್ಲಿಯ ತುಪ್ಪ ಸೇಫ್ ಅಲ್ಲ ಎಂಬ ವರದಿ ಬಂದಿರುವ ಕಡೆ ತುಪ್ಪ ತಯಾರಿಕಾ ಘಟಕಕ್ಕೆ ಆಹಾರ ಮತ್ತು ಸುರಕ್ಷತಾ ಇಲಾಖೆ ನೋಟಿಸ್ ನೀಡಿದೆ. 30 ದಿನಗಳ ಒಳಗೆ ತುಪ್ಪ ಅಸುರಕ್ಷತೆ ಅಲ್ಲ ಎಂದು ಸಾಬೀತುಪಡಿಸಲು ಆಹಾರ ಮತ್ತು ಸುರಕ್ಷತಾ ಇಲಾಖೆ ಸೂಚನೆ ನೀಡಿದೆ.
ಇದೀಗ ದೇಶಾದ್ಯಂತ ತಿರುಪತಿ ಲಡ್ಡು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಇನ್ನು ತಿರುಪತಿ ಲಡ್ಡಿಗೆ ಕಳಪೆ ಗುಣಮಟ್ಟದ ತುಪ್ಪ, ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದ ನಂದಿನಿ ತುಪ್ಪ ಹೊರತುಪಡಿಸಿ, ಉಳಿದ ತುಪ್ಪಗಳನ್ನು ಟೆಸ್ಟ್ ಮಾಡಲು ಆರೋಗ್ಯ ಸಚಿವರು ಸೂಚಿಸಿದ್ದರು.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…