ಪ್ರಜಾವಾಣಿ ವಿಶೇಷ ಸಂದರ್ಶನದಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮಾತನಾಡಿದರು ಪ್ರಜಾವಾಣಿ ಚಿತ್ರ: ಕೃಷ್ಣ ಕುಮಾರ್ ಪಿ.ಎಸ್.
ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಸಚಿವ ಎಂ.ಬಿ ಪಾಟೀಲ್ ಅವರು ಶಿಫಾರಸು ಮಾಡಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಈ ಪತ್ರದಲ್ಲಿ ತಿಳಿಸಿದ್ದಾರೆ.
ಸರ್ಕಾರ ಈ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ ಎಂದು ಪ್ರಸ್ತಾಪಿಸಿದ್ದಾರೆ.
ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ಸೂಚಿಸಿರುವ ಸಂತರ ಕೊಡುಗೆ ಮೌಲಿಕವಾಗಿದೆ. ಈ ಶಿಫಾರಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಮನವಿ ಮಾಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…