ಪ್ರಜಾವಾಣಿ ವಿಶೇಷ ಸಂದರ್ಶನದಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮಾತನಾಡಿದರು ಪ್ರಜಾವಾಣಿ ಚಿತ್ರ: ಕೃಷ್ಣ ಕುಮಾರ್ ಪಿ.ಎಸ್.
ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಸಚಿವ ಎಂ.ಬಿ ಪಾಟೀಲ್ ಅವರು ಶಿಫಾರಸು ಮಾಡಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಈ ಪತ್ರದಲ್ಲಿ ತಿಳಿಸಿದ್ದಾರೆ.
ಸರ್ಕಾರ ಈ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ ಎಂದು ಪ್ರಸ್ತಾಪಿಸಿದ್ದಾರೆ.
ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ಸೂಚಿಸಿರುವ ಸಂತರ ಕೊಡುಗೆ ಮೌಲಿಕವಾಗಿದೆ. ಈ ಶಿಫಾರಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಮನವಿ ಮಾಡಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…