Featured

ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ ; ಅ.1ರಿಂದ ಜಾರಿ – vishwanews24

ದೇವಾಲಯಗಳ ಸೇವಾಶುಲ್ಕ ಹೆಚ್ಚಳ  ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ  ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೇ ಏರಿಕೆಯಾಗಿದ್ದು, ಇನ್ಮೇಲೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ  ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಅಕ್ಟೋಬರ್‌ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ‌ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾಶುಲ್ಕವನ್ನ, ಆಗಮ ಪಂಡಿತರ ಪರಿಶೀಲನೆ ‌ನಂತರ 5-10% ವರೆಗೂ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿದ್ದಾರೆ. ಇದು ದೇವಾಲಯಗಳ ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲವೆಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಯಾವ್ಯಾವ ದೇವಸ್ಥಾನಗಳಲ್ಲಿ ಶುಲ್ಕ ಏರಿಕೆ?
ಬೆಂಗಳೂರು ನಗರ
* ಯೋಗ ನರಸಿಂಹಸ್ವಾಮಿ ದೇವಾಲಯ, ಮಲ್ಲೇಶ್ವರಂ
* ನಂದಿ ತೀರ್ಥ ದೇವಾಲಯ, ಮಲ್ಲೇಶ್ವರಂ
* ಮಹಾಗಣಪತಿ ದೇವಾಲಯ, ಮಲ್ಲೇಶ್ವರಂ

ಚಿಕ್ಕಬಳ್ಳಾಪುರ
* ವಿಧುರಾಶ್ವಥ ನಾರಾಯಣ ಸ್ವಾಮಿ ದೇವಾಲಯ
* ವೆಂಕಟರಮಣ ದೇವಾಲಯ, ತಲಕಾಯ ಬೆಟ್ಟ

ದಕ್ಷಿಣ ಕನ್ನಡ
* ಮಹಾಲಿಂಗೇಶ್ವರ ದೇವಾಲಯ, ಪುತ್ತೂರು
* ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
* ಸೌತಡ್ಕ ಮಹಾಗಣಪತಿ ದೇವಾಲಯ
* ಸೂರ್ಯನಾರಾಯಣ ಸ್ವಾಮಿ ದೇವಾಲಯ, ಮರೋಳಿ

ಇನ್ನೂ ನಾಗಾರಾಧನೆ, ದೈವರಾಧನೆಗೆ ಹೆಸರಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ 2010ರಲ್ಲಿ ಸೇವಾಶುಲ್ಕ ಏರಿಕೆ ಮಾಡಲಾಗಿತ್ತು. 15 ವರ್ಷಗಳ ನಂತರ ಇದೀಗ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಕುಕ್ಕೆಯಲ್ಲಿ ಆಶ್ಲೇಷ ಪೂಜೆ ಸೇವೆಗೆ ಈ ಹಿಂದೆ ಇದ್ದ ದರ 400 ರೂಪಾಯಿ, ಪರಿಷ್ಕೃತ ದರ 500 ರೂ.ಗೆ ಏರಿಕೆಯಾಗಿದೆ. ನಾಗಪ್ರತಿಷ್ಠೆಗೆ ಈ ಹಿಂದೆ ಇದ್ದ ದರ 400 ರೂಪಾಯಿ. ಆದರೆ ಧಾರ್ಮಿಕ ದತ್ತಿ ಇಲಾಖೆ ಪರಿಷ್ಕೃತ ದರ 500 ರೂಪಾಯಿ ಹೆಚ್ಚಿಸಿದೆ. ಹೀಗೆ ಉಳಿದ‌ ಸೇವೆಗಳಲ್ಲೂ‌ ಭಾರೀ‌ ಹೆಚ್ಚಳ ಮಾಡಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

11 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago