Featured

ರಾಜ್ಯಪಾಲರು ವಿಶ್ವಾಸ ಮತಯಾಚನೆಗೆ ನಿರ್ದೇಶನ ನೀಡಿದ್ದು ಸರಿ ಅಲ್ಲ : ಕುಮಾರಸ್ವಾಮಿ -Vishwanews24

ಬೆಂಗಳೂರು : ಬಹುಮತ ಇಂದೇ ಸಾಬೀತುಪಡಿಸಿ ಎಂದ ರಾಜ್ಯಪಾಲರ ಆದೇಶ ವಿರುದ್ಧ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ಸಿ.ಎಂ ಕುಮಾರಸ್ವಾಮಿ ಹೇಳಿದ್ದಾರೆ.

“ವಿಶ್ವಾಸ ನಿರ್ಣಯ ಮಂಡನೆ ಬಗ್ಗೆ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಬೇಕು. ಹೀಗಿರುವಾಗ ರಾಜ್ಯಪಾಲರು ವಿಶ್ವಾಸ ಮತಯಾಚನೆಗೆ ನಿರ್ದೇಶನ ನೀಡಿದ್ದು ಸರಿ ಅಲ್ಲ,” ಎನ್ನುವ ಅಭಿಪ್ರಾಯವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಹಾಗಾಗಿ ತುರ್ತಾಗಿ ವಿಚಾರಣೆ ನಡೆಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಅಧಿವೇಶನಕ್ಕೆ ಬಾರದ ಅತೃಪ್ತ ಶಾಸಕರ ಮೇಲೆ ಸದನಕ್ಕೆ ಬರಲು ಬಲವಂತಪಡಿಸುವಂತಿಲ್ಲ ಹಾಗೂ ಅವರ ವಿರುದ್ಧ ವಿಪ್ ಜಾರಿ ಮಾಡುವಂತಿಲ್ಲ ಎಂದ ಸೂಚಿಸಿದ ಸುಪ್ರೀಂಕೋರ್ಟ್. ಕೋರ್ಟ್‌ನ ಈ ಸೂಚನೆಯ ಬಗ್ಗೆ ಸ್ಪಷ್ಟೀಕರಣ ಕೇಳಲು ಸಿ.ಎಂ. ಹೆಚ್.ಡಿ.ಕೆ ಮುಂದಾಗಿದ್ದಾರೆ.

ಗುರುವಾರ ವಿಶ್ವಾಸ ಮತಯಾಚನೆ ಮೇಲೆ ನಡೆದ ಚರ್ಚೆ ವೇಳೆ ಬಿಜೆಪಿಯವರ ಒತ್ತಾಯದ ಮೇರೆಗೆ ಸದನದ ಮಧ್ಯ ಪ್ರವೇಶಿಸಿದ್ದ ರಾಜ್ಯಪಾಲರು, ಆಡಳಿತ ಪಕ್ಷವನ್ನು ಇಂದೇ ಬಹುಮತ ಸಾಬೀತುಪಡಿಸುವಂತೆ ಸ್ಪೀಕರ್ ಅವರಿಗೆ ಸೂಚನೆ ನೀಡಿದ್ದರು. ಆದರೆ, ‘ಪಕ್ಷಾಂತರ ಕಾಯ್ದೆ, ವಿಪ್’  ಸೇರಿದಂತೆ ಪ್ರಮುಖ ವಿಚಾರಗಳ ಚರ್ಚೆಯಾಗಿ ತೀರ್ಮಾನ ಕೈಗೊಳ್ಳದೆ ವಿಶ್ವಾಸಮತ ಯಾಚಿಸುವುದಿಲ್ಲ. ಅಲ್ಲದೆ, ಸದನದ ಕಲಾಪದಲ್ಲಿ ಮಧ್ಯಪ್ರವೇಶಿಸುವ, ಸ್ಪೀಕರ್​ಗೆ ಆದೇಶಿಸುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ” ಎಂದು ಮೈತ್ರಿ ಪಕ್ಷದ ನಾಯಕರು ಸ್ಪಷ್ಟಪಡಿಸಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago