ಬೆಂಗಳೂರು : ಬಹುಮತ ಇಂದೇ ಸಾಬೀತುಪಡಿಸಿ ಎಂದ ರಾಜ್ಯಪಾಲರ ಆದೇಶ ವಿರುದ್ಧ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ಸಿ.ಎಂ ಕುಮಾರಸ್ವಾಮಿ ಹೇಳಿದ್ದಾರೆ.
“ವಿಶ್ವಾಸ ನಿರ್ಣಯ ಮಂಡನೆ ಬಗ್ಗೆ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಬೇಕು. ಹೀಗಿರುವಾಗ ರಾಜ್ಯಪಾಲರು ವಿಶ್ವಾಸ ಮತಯಾಚನೆಗೆ ನಿರ್ದೇಶನ ನೀಡಿದ್ದು ಸರಿ ಅಲ್ಲ,” ಎನ್ನುವ ಅಭಿಪ್ರಾಯವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಹಾಗಾಗಿ ತುರ್ತಾಗಿ ವಿಚಾರಣೆ ನಡೆಸುವಂತೆ ಕೋರ್ಟ್ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಅಧಿವೇಶನಕ್ಕೆ ಬಾರದ ಅತೃಪ್ತ ಶಾಸಕರ ಮೇಲೆ ಸದನಕ್ಕೆ ಬರಲು ಬಲವಂತಪಡಿಸುವಂತಿಲ್ಲ ಹಾಗೂ ಅವರ ವಿರುದ್ಧ ವಿಪ್ ಜಾರಿ ಮಾಡುವಂತಿಲ್ಲ ಎಂದ ಸೂಚಿಸಿದ ಸುಪ್ರೀಂಕೋರ್ಟ್. ಕೋರ್ಟ್ನ ಈ ಸೂಚನೆಯ ಬಗ್ಗೆ ಸ್ಪಷ್ಟೀಕರಣ ಕೇಳಲು ಸಿ.ಎಂ. ಹೆಚ್.ಡಿ.ಕೆ ಮುಂದಾಗಿದ್ದಾರೆ.
ಗುರುವಾರ ವಿಶ್ವಾಸ ಮತಯಾಚನೆ ಮೇಲೆ ನಡೆದ ಚರ್ಚೆ ವೇಳೆ ಬಿಜೆಪಿಯವರ ಒತ್ತಾಯದ ಮೇರೆಗೆ ಸದನದ ಮಧ್ಯ ಪ್ರವೇಶಿಸಿದ್ದ ರಾಜ್ಯಪಾಲರು, ಆಡಳಿತ ಪಕ್ಷವನ್ನು ಇಂದೇ ಬಹುಮತ ಸಾಬೀತುಪಡಿಸುವಂತೆ ಸ್ಪೀಕರ್ ಅವರಿಗೆ ಸೂಚನೆ ನೀಡಿದ್ದರು. ಆದರೆ, ‘ಪಕ್ಷಾಂತರ ಕಾಯ್ದೆ, ವಿಪ್’ ಸೇರಿದಂತೆ ಪ್ರಮುಖ ವಿಚಾರಗಳ ಚರ್ಚೆಯಾಗಿ ತೀರ್ಮಾನ ಕೈಗೊಳ್ಳದೆ ವಿಶ್ವಾಸಮತ ಯಾಚಿಸುವುದಿಲ್ಲ. ಅಲ್ಲದೆ, ಸದನದ ಕಲಾಪದಲ್ಲಿ ಮಧ್ಯಪ್ರವೇಶಿಸುವ, ಸ್ಪೀಕರ್ಗೆ ಆದೇಶಿಸುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ” ಎಂದು ಮೈತ್ರಿ ಪಕ್ಷದ ನಾಯಕರು ಸ್ಪಷ್ಟಪಡಿಸಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…