ಮಂಗಳೂರು: ತಮ್ಮನ್ನು ರಾಜ್ಯ ಸಭೆಗೆ ನಾಮನಿರ್ದೇಶನಗೊಳಿಸಿದ ಬಗ್ಗೆ ಡಾ.ಡಿ. ವಿರೇಂದ್ರ ಹೆಗ್ಗಡೆ ಪ್ರತಿಕ್ರಿಯಿಸಿದ್ದು, ದೇಶ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯ ಸಭೆ ಅಂದರೆ ಹಿರಿಯರ ವೇದಿಕೆ. ತಮ್ಮ ತಮ್ಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ಅನುಭವ ಹಂಚಿಕೊಳ್ಳುವ ಅವಕಾಶ ಸಿಕ್ಕಿದೆ.
ರಾಜ್ಯಸಭೆ ನಾಮನಿರ್ದೇಶನದ ಮೂಲಕ ನನಗೆ ಮೋದಿಯವರು ದೇಶಸೇವೆಯ ಅವಕಾಶ ಕೊಟ್ಟಿದ್ದಾರೆ.
ಇದು ನಾಮನಿರ್ದೇಶನವಾದ ಕಾರಣ ಇದರಲ್ಲಿ ಯಾವುದೇ ಉತ್ಸಾಹದ ರಾಜಕಾರಣ ಇಲ್ಲ. ನನ್ನ ಜೊತೆಗೆ ಬೇರೆ ಕ್ಷೇತ್ರದ ಪ್ರಖ್ಯಾತ ವ್ಯಕ್ತಿಗಳನ್ನ ಕೂಡ ಗುರುತಿಸಲಾಗಿದೆ.
ನಾವು ಗ್ರಾಮೀಣಾಭಿವೃದ್ಧಿ ಯೋಜನೆ ಮಾಡಿದ್ದೇವೆ, ಇದನ್ನು ಇತರ ರಾಜ್ಯಗಳಿಗೂ ವಿಸ್ತರಣೆ ಮಾಡಬಹುದು. ದೇಗುಲ ಜೀರ್ಣೋದ್ಧಾರ, ಧಾರ್ಮಿಕ ಕ್ಷೇತ್ರದ ಶುದ್ಧತೆ, ಪಾವಿತ್ರ್ಯತೆ ರಕ್ಷಣೆ ಇತ್ಯಾದಿ ವಿಚಾರಗಳನ್ನು ಮಾಡುವ ಅವಕಾಶವಿದೆ ಎಂದಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…