ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.
ಕೋಲಾರ ಶಾಸಕ ಕೆ. ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಉಚ್ಚಾಟನೆಗೊಂಡವರು. ಶಾಸಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ರಾಜ್ಯ ಘಟಕದ ಪ್ರಮುಖರ ಸಭೆಯಲ್ಲಿ ಉಭಯ ಶಾಸಕರನ್ನು ಉಚ್ಚಾಟಿಸುವ ಸಂಬಂಧ ಕೈಗೊಂಡ ನಿರ್ಣಯ ಆಧರಿಸಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಉಚ್ಚಾಟನೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಇಬ್ಬರನ್ನೂ ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವ ಸಲುವಾಗಿ ಮುಂದಿನ ಮೂರು ದಿನಗಳೊಳಗಾಗಿ ವಿಧಾನಸಭಾ ಅಧ್ಯಕ್ಷರಿಗೆ ದೂರು ನೀಡಲು ಈ ವೇಳೆ ನಿರ್ಧರಿಸಲಾಗಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಿ. ಕುಪೇಂದ್ರ ರೆಡ್ಡಿ ಅವರಿಗೆ ಮತ ಚಲಾಯಿಸಬೇಕೆಂಬ ವಿಪ್ನ್ನು ಪಕ್ಷ ಹೊರಡಿಸಿದ್ದರೂ, ಈ ಇಬ್ಬರೂ ವಿಪ್ ಉಲ್ಲಂಘಿಸಿ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿದ್ದರು.
ಗುಬ್ಬಿ ಶ್ರೀನಿವಾಸ್ ಅವರು ಪ್ರಥಮ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿ ಲಹರ್ ಸಿಂಗ್ ಅವರಿಗೆ ಮತ್ತು ದ್ವಿತೀಯ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಿದ್ದರು.
ಕೆ. ಶ್ರೀನಿವಾಸ ಗೌಡ ಪ್ರಥಮ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ಗೆ ಹಾಗೂ ದ್ವಿತೀಯ ಪ್ರಾಶಸ್ತ್ಯದ ಮತವನ್ನು ಬಿಜೆಪಿಯ ಲೆಹರ್ ಸಿಂಗ್ಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರೂ ಶಾಸಕರು ಇದೀಗ ಜೆಡಿಎಸ್ನಿಂದ ಉಚ್ಚಾಟಿಸಲ್ಪಟ್ಟಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…