ಕರಾವಳಿ ಭಾಗದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ರಾಜ್ಯಸಭೆ ಟಿಕೆಟ್ ಬಿಜೆಪಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ
ಉಡುಪಿ: ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಕರಾವಳಿಯ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಹೆಸರು ಪ್ರಮುಖ ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಈ ಬೆಳವಣಿಗೆ ಉಡುಪಿ ಸೇರಿದಂತೆ ಕರಾವಳಿ ಭಾಗದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಪ್ರಮೋದ್ ಮಧ್ವರಾಜ್ ಅವರು ಉಡುಪಿಯ ಹೆಸರಾಂತ ಮಧ್ವರಾಜ್ ಕುಟುಂಬದ ರಾಜಕೀಯ ವಾರಸುದಾರರಾಗಿದ್ದಾರೆ. ಅವರ ತಾಯಿ ಮನೋರಮಾ ಮಧ್ವರಾಜ್ ಉಡುಪಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಪ್ರಭಾವಿ ರಾಜಕಾರಣಿಯಾಗಿದ್ದರು. ತಾಯಿಯ ರಾಜಕೀಯ ಪರಂಪರೆಯನ್ನು ಮುಂದುವರಿಸಿದ ಪ್ರಮೋದ್ ಮಧ್ವರಾಜ್ ಅವರು ಯುವ ವಯಸ್ಸಿನಲ್ಲಿಯೇ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡರು.
2013ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಅವರು, ಬಳಿಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೀನುಗಾರಿಕೆ, ಯುವಜನ ಸೇವೆ ಮತ್ತು ಕ್ರೀಡಾ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದರು. ಸಚಿವರಾಗಿದ್ದ ಅವಧಿಯಲ್ಲಿ ಕರಾವಳಿ ಭಾಗದ ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಹಲವು ಯೋಜನೆಗಳನ್ನು ಜಾರಿಗೊಳಿಸಿ ಗಮನ ಸೆಳೆದಿದ್ದರು.
2018ರ ವಿಧಾನಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಪ್ರಮೋದ್, ಪಕ್ಷದಲ್ಲಿ ಸಂಘಟನಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕರಾವಳಿ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಅವರು ನೀಡಿದ ಕೊಡುಗೆ ಗಮನಾರ್ಹವಾಗಿದೆ.
ಪ್ರಸ್ತುತ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಮೋದ್ ಮಧ್ವರಾಜ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಪಕ್ಷಕ್ಕೆ ದೀರ್ಘಕಾಲದ ಸೇವೆ, ಆಡಳಿತಾತ್ಮಕ ಅನುಭವ ಹಾಗೂ ಕರಾವಳಿ ಭಾಗದಲ್ಲಿ ಹೊಂದಿರುವ ಪ್ರಭಾವದಿಂದಾಗಿ ಅವರಿಗೆ ಅವಕಾಶ ಸಿಗುವ ಸಾಧ್ಯತೆಯನ್ನು ಇದೆ ಏನ್ನಲಾಗಿದೆ.
ರಾಜ್ಯಸಭೆಗೆ ಆಯ್ಕೆಯಾದರೆ ಉಡುಪಿ ಜಿಲ್ಲೆಯಿಂದ ರಾಷ್ಟ್ರೀಯ ರಾಜಕೀಯದಲ್ಲಿ ಮತ್ತೊಮ್ಮೆ ಪ್ರಬಲ ಧ್ವನಿ ಕೇಳಿಸಿಕೊಳ್ಳುವ ಅವಕಾಶ ಸಿಗಲಿದೆ. ಕರಾವಳಿ ಭಾಗದ ಮೀನುಗಾರಿಕೆ, ಬಂದರು, ಪ್ರವಾಸೋದ್ಯಮ ಹಾಗೂ ಮೂಲಸೌಕರ್ಯ ಅಭಿವೃದ್ಧಿ ವಿಚಾರಗಳನ್ನು ರಾಷ್ಟ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಪ್ರಸ್ತಾಪಿಸಲು ಸಾಧ್ಯವಾಗಲಿದೆ ಎಂಬ ಅಭಿಪ್ರಾಯ ಕಾರ್ಯಕರ್ತರಲ್ಲಿ ವ್ಯಕ್ತವಾಗಿದೆ.
ಆದರೆ ಅಂತಿಮ ನಿರ್ಧಾರ ಬಿಜೆಪಿ ಕೇಂದ್ರ ನಾಯಕತ್ವದ ಕೈಯಲ್ಲಿದ್ದು, ಅಭ್ಯರ್ಥಿ ಘೋಷಣೆಯವರೆಗೆ ರಾಜಕೀಯ ಕುತೂಹಲ ಮುಂದುವರಿಯುವ ಸಾಧ್ಯತೆ ಇದೆ. ರಾಜ್ಯಸಭೆ ಟಿಕೆಟ್ ರೇಸ್ನಲ್ಲಿ ಪ್ರಮೋದ್ ಮಧ್ವರಾಜ್ ಅವರ ಹೆಸರು ಮುಂಚೂಣಿಯಲ್ಲಿರುವುದು ಉಡುಪಿ ಜಿಲ್ಲೆಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…