Featured

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ -vishwanews24

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ

ಮಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಹಾರ ಇಲಾಖೆಯು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವು ಆಹಾರ ತಯಾರಿಕಾ ಕೇಂದ್ರಗಳಿಗೆ ನೋಟಿಸ್ ಜಾರಿ ಮಾಡಿದೆ. ಈ ತಪಾಸಣಾ ಅಭಿಯಾನವು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿರದೆ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಬುಧವಾರ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ಈಗಾಗಲೇ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಅಳವಡಿಸಿದ್ದು, ಇದರ ಮೂಲಕ ಸಾರ್ವಜನಿಕರಿಂದ ಬರುವ ದೂರುಗಳನ್ನಾಧರಿಸಿ ನೇರ ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರಿನಲ್ಲಿ ಕ್ಯೂಆರ್ ಕೋಡ್ ಮೂಲಕ ಬಂದ ದೂರಿನನ್ವಯ ಈಗಾಗಲೇ ಎರಡು ಪ್ರಮುಖ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆಗೊಳಪಡಿಸಿದ್ದಾರೆ ಎಂದರು.

ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಪಿಜಿಗಳಿಗೂ ಕಡ್ಡಾಯವಾಗಿ ಶುಚಿತ್ವ ಹಾಗೂ ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಇದನ್ನು ಪಾಲಿಸದಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ  -vishwanews24

ಉಡುಪಿ : ಯುವತಿ ನಾಪತ್ತೆ  ಉಡುಪಿ : ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಈಶ್ವರಿ (18) ಎಂಬ ಯುವತಿ…

39 minutes ago

ಮಂಗಳೂರು : ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ ; 3 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ -vishwanews24

ಮಂಗಳೂರು : ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ ; 3 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು :…

52 minutes ago

ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ -vishwanews24

ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ ಕೋಲಾರ: ಸಾಲ  ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ …

1 hour ago

ತಮಿಳುನಾಡಿನ 52 ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ನಿಷೇಧ -vishwanews24

ತಮಿಳುನಾಡಿನ 52 ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ನಿಷೇಧ ಚೆನ್ನೈ : ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ…

1 hour ago

ಉಡುಪಿ : ಈ ಬಾರಿ ಕೃಷ್ಣ ಜನ್ಮಾಷ್ಟಮಿ ಗೆ ‘ಮರ್ಮೆನ್’ ಅವತಾರದಲ್ಲಿ ರವಿ ಕಟಪಾಡಿ -vishwanews24

ಉಡುಪಿ : ಈ ಬಾರಿ ಕೃಷ್ಣ ಜನ್ಮಾಷ್ಟಮಿ ಗೆ ‘ಮರ್ಮೆನ್’ ಅವತಾರದಲ್ಲಿ ರವಿ ಕಟಪಾಡಿ ಉಡುಪಿ: ವಿಭಿನ್ನ ವೇಷ ಧರಿಸಿ…

1 hour ago

ಬೆಳ್ತಂಗಡಿ: ಭ್ರಷ್ಟಾಚಾರ ಪ್ರಕರಣ: ಎಸ್‌ಐಟಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು – vishwanews24

ಬೆಳ್ತಂಗಡಿ: ಭ್ರಷ್ಟಾಚಾರ ಪ್ರಕರಣ: ಎಸ್‌ಐಟಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ…

1 day ago